ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

ಜಯಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ: ಶ್ರೇಯಸ್ ಪಟೇಲ್ ತಾಯಿ

Published : Jun 05, 2024, 09:08 AM ISTUpdated : Jun 05, 2024, 09:09 AM IST

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಗೆಲುವು ಹಿನ್ನೆಲೆ ಮಗನ ಗೆಲುವಿಗೆ ತಾಯಿ ಆನಂದಭಾಷ್ಪ ಸುರಿಸಿದ್ದಾರೆ. 
 

ಹಾಸನ ಲೋಕಸಭಾ ಕ್ಷೇತ್ರದಲ್ಲಿ (Hassan Lok Sabha Constituency) ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ (Shreyas Patel) ಗೆಲುವು ಹಿನ್ನೆಲೆ ಮಗನ ಗೆಲುವಿಗೆ ತಾಯಿ ಆನಂದಭಾಷ್ಪ ಸುರಿಸಿದ್ದಾರೆ. ಮಗನ ಗೆಲುವಿಗೆ ಸಂತಸ ಹೊರಹಾಕಿದ ತಾಯಿ ಅನುಪಮಾ, ಸತತ ಸೋಲಿನಿಂದ ಕೆಂಗಟ್ಟಿದ್ದ ನಮಗೆ ಗೆಲುವು ಸಿಕ್ಕಿದ್ದು ಖುಷಿ ತಂದಿದೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಗೆ  (Siddaramaiah, D K Shivakumar) ಧನ್ಯವಾದ ಅರ್ಪಿಸುತ್ತೇನೆ, ಹಾಗೆಯೇ ಹಾಸನದ ಜನತೆಗೆ ಧನ್ಯವಾದ ಎಂದಿದ್ದಾರೆ.

ಹಾಸನದ ಜನತೆ ದರ್ಪದ ರಾಜಕಾರಣಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ. ಮೂರು ಬಾರಿ ಸೋತರು ನಮಗೆ ಪಕ್ಷ ಅವಕಾಶ ಮಾಡಿಕೊಟ್ಟಿದ್ದಕ್ಕೆ ನಾನು ಅವರಿಗೆ ಆಭಾರಿಯಾಗಿದ್ದೇನೆ, ಪದೇಪದೇ ಸೋಲನ್ನು ತಡೆಯುವ ಶಕ್ತಿ ನನ್ನಲ್ಲಿ ಇರಲಿಲ್ಲ, ಈ ಗೆಲುವು ನಮಗೆ ಅವಶ್ಯಕತೆ ಇತ್ತು. ಸತತ ಸೋಲುಂಡಾಗ ಕೆಲ ವಿರೋಧ ಪಕ್ಷದ ನಾಯಕರು ನನ್ನನ್ನು ಹೀಯಾಳಿಸಿದ್ದರು ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. 2008ರ ಚುನಾವಣೆಯಲ್ಲಿ  ಆಫ್ಟ್ರಾಲ್ ಜಯಲಕ್ಷ್ಮಿ ರೈಸ್ ಮಿಲ್ ಓನರಲ್ಲ ಅಂತಾ ಹಾಸನದ ದೊಡ್ಡ ನಾಯಕರು ಹೇಳಿದ್ದರು.ಈಗ  ನಾನು ಅವರಿಗೆ ಹೇಳುವುದಕ್ಕೆ ಇಷ್ಟಪಡುತ್ತೇನೆ, ಜಯ ಲಕ್ಷ್ಮಿ ರೈಸ್ ಮಿಲ್ ಓನರ್ ಮಗ ಇವತ್ತು ಹಾಸನದ ಎಂಪಿ ಆಗಿದ್ದಾನೆ ಅಂತಾ ಎಂದು ಟಾಂಗ್‌ ನಿಡಿದ್ದಾರೆ.

ಇದನ್ನೂ ವೀಕ್ಷಿಸಿ:  ಏನೂ ಮಾಡದೇ ಆತ ಕೊಲೆಯಾಗಿದ್ದೇಕೆ..? ಮೀಟರ್ ಬಡ್ಡಿ ದಂಧೆಗೆ ಬಿತ್ತಾ ಪುಡಿ ರೌಡಿಯ ಹೆಣ ?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!