ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

Published : Mar 03, 2024, 05:55 PM ISTUpdated : Mar 03, 2024, 05:57 PM IST

ಕೈ ಸರ್ಕಾರದ ಭವಿಷ್ಯ ನಿರ್ಧರಿಸಲಿದ್ಯಾ ಲೋಕಸಭಾ ಚುನಾವಣೆ..?
2019ರ ಲೋಕಯುದ್ಧದ ಬೆನ್ನಲ್ಲೇ ಪತನಗೊಂಡಿತ್ತು ಮೈತ್ರಿ ಸರ್ಕಾರ..!    
ಲೋಕಸಂಗ್ರಾಮದ ಹೊಸ್ತಿಲಲ್ಲೇ ಮತ್ತೆ ಸಿಡಿದ ಆಪರೇಷನ್ ಬಾಂಬ್..!

50 ಕೋಟಿಯ ಆಪರೇಷನ್ ಆಟ. ಇದು ಮುಖ್ಯಮಂತ್ರಿಗಳ ಕೋಟೆಯಿಂದಲೇ ನುಗ್ಗಿ ಬಂದಿರೋ ಆಪರೇಷನ್ ಸುನಾಮಿ. ಕಾಂಗ್ರೆಸ್(Congress) ಸರ್ಕಾರವನ್ನು ಕೆಡವಲು ತೆರೆಯ ಹಿಂದೆ ಆಪರೇಷನ್ ಆಟ ಶುರುವಾಗಿದ್ಯಂತೆ. ಕೈ ಶಾಸಕರಿಗೆ 50 ಕೋಟಿಯ ಬೆಲೆ ಕಟ್ಟಲಾಗ್ತಿದ್ಯಂತೆ. ಇಂಥದ್ದೊಂದು ಆರೋಪ ಮಾಡಿರೋದು ಬೇರಾರೂ ಅಲ್ಲ, ಸ್ವತಃ ರಾಜ್ಯದ ಮುಖ್ಯಮಂತ್ರಿ. ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್ ನೀಡಲಾಗ್ತಿದ್ಯಂತೆ. ಇದನ್ನು ಯಾರೋ ಒಬ್ಬ ಶಾಸಕ ಹೇಳಿದ್ದಿದ್ರೆ ಅದು ಬೇರೆ ಮಾತು. ಆದ್ರೆ ಇಂತಹ ಒಂದು ಗಂಭೀರ ಆರೋಪ ಮಾಡಿರೋದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah). ಅತ್ತ ಬೆಂಗಳೂರಿನ(Bengaluru) ರಾಮೇಶ್ವರ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿ ರಾಜಧಾನಿಯೇ ಬೆಚ್ಚಿ ಬಿದ್ದಿದ್ರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಡಿಸಿರೋ ಆಪರೇಷನ್ ಬಾಂಬ್'ಗೆ ರಾಜ್ಯ ರಾಜಕೀಯವೇ ಬೆಚ್ಚಿ ಬಿದ್ದಿದೆ. ಇಲ್ಲಿವರೆಗೆ ಕಾಂಗ್ರೆಸ್ ಶಾಸಕರು ಬಿಜೆಪಿ(Bjp) ವಿರುದ್ಧ ಆಪರೇಷನ್ ಆರೋಪ ಮಾಡ್ತಾ ಇದ್ರು. ಆದ್ರೆ ಇದೇ ಮೊದಲ ಬಾರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವ್ರೇ ಆಪರೇಷನ್ ಬಾಂಬ್ ಸಿಡಿಸಿದ್ದಾರೆ. ಅದೂ 50 ಕೋಟಿಯ ಆಪರೇಷನ್ ಬಾಂಬ್. ಹಿಮಾಚಲ ಪ್ರದೇಶದಲ್ಲಿ ಆರು ಮಂದಿ ಕಾಂಗ್ರೆಸ್ ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ ಮತದಾನ ಮಾಡಿ, ಸರ್ಕಾರದ ಬುಡವನ್ನೇ ಅಲುಗಾಡಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ರಾಜ್ಯದಲ್ಲೂ ಅಂಥದ್ದೇ ಆಪರೇಷನ್ ಪ್ರಯತ್ನ ನಡೀತಾ ಇದೆ ಅಂತ ಗಂಭೀರ ಆರೋಪ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ: ಗೃಹ ಸಚಿವ ಪರಮೇಶ್ವರ್‌

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more