ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

Published : Mar 03, 2024, 05:55 PM ISTUpdated : Mar 03, 2024, 05:57 PM IST

ಕೈ ಸರ್ಕಾರದ ಭವಿಷ್ಯ ನಿರ್ಧರಿಸಲಿದ್ಯಾ ಲೋಕಸಭಾ ಚುನಾವಣೆ..?
2019ರ ಲೋಕಯುದ್ಧದ ಬೆನ್ನಲ್ಲೇ ಪತನಗೊಂಡಿತ್ತು ಮೈತ್ರಿ ಸರ್ಕಾರ..!    
ಲೋಕಸಂಗ್ರಾಮದ ಹೊಸ್ತಿಲಲ್ಲೇ ಮತ್ತೆ ಸಿಡಿದ ಆಪರೇಷನ್ ಬಾಂಬ್..!

50 ಕೋಟಿಯ ಆಪರೇಷನ್ ಆಟ. ಇದು ಮುಖ್ಯಮಂತ್ರಿಗಳ ಕೋಟೆಯಿಂದಲೇ ನುಗ್ಗಿ ಬಂದಿರೋ ಆಪರೇಷನ್ ಸುನಾಮಿ. ಕಾಂಗ್ರೆಸ್(Congress) ಸರ್ಕಾರವನ್ನು ಕೆಡವಲು ತೆರೆಯ ಹಿಂದೆ ಆಪರೇಷನ್ ಆಟ ಶುರುವಾಗಿದ್ಯಂತೆ. ಕೈ ಶಾಸಕರಿಗೆ 50 ಕೋಟಿಯ ಬೆಲೆ ಕಟ್ಟಲಾಗ್ತಿದ್ಯಂತೆ. ಇಂಥದ್ದೊಂದು ಆರೋಪ ಮಾಡಿರೋದು ಬೇರಾರೂ ಅಲ್ಲ, ಸ್ವತಃ ರಾಜ್ಯದ ಮುಖ್ಯಮಂತ್ರಿ. ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್ ನೀಡಲಾಗ್ತಿದ್ಯಂತೆ. ಇದನ್ನು ಯಾರೋ ಒಬ್ಬ ಶಾಸಕ ಹೇಳಿದ್ದಿದ್ರೆ ಅದು ಬೇರೆ ಮಾತು. ಆದ್ರೆ ಇಂತಹ ಒಂದು ಗಂಭೀರ ಆರೋಪ ಮಾಡಿರೋದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah). ಅತ್ತ ಬೆಂಗಳೂರಿನ(Bengaluru) ರಾಮೇಶ್ವರ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿ ರಾಜಧಾನಿಯೇ ಬೆಚ್ಚಿ ಬಿದ್ದಿದ್ರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಡಿಸಿರೋ ಆಪರೇಷನ್ ಬಾಂಬ್'ಗೆ ರಾಜ್ಯ ರಾಜಕೀಯವೇ ಬೆಚ್ಚಿ ಬಿದ್ದಿದೆ. ಇಲ್ಲಿವರೆಗೆ ಕಾಂಗ್ರೆಸ್ ಶಾಸಕರು ಬಿಜೆಪಿ(Bjp) ವಿರುದ್ಧ ಆಪರೇಷನ್ ಆರೋಪ ಮಾಡ್ತಾ ಇದ್ರು. ಆದ್ರೆ ಇದೇ ಮೊದಲ ಬಾರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವ್ರೇ ಆಪರೇಷನ್ ಬಾಂಬ್ ಸಿಡಿಸಿದ್ದಾರೆ. ಅದೂ 50 ಕೋಟಿಯ ಆಪರೇಷನ್ ಬಾಂಬ್. ಹಿಮಾಚಲ ಪ್ರದೇಶದಲ್ಲಿ ಆರು ಮಂದಿ ಕಾಂಗ್ರೆಸ್ ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ ಮತದಾನ ಮಾಡಿ, ಸರ್ಕಾರದ ಬುಡವನ್ನೇ ಅಲುಗಾಡಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ರಾಜ್ಯದಲ್ಲೂ ಅಂಥದ್ದೇ ಆಪರೇಷನ್ ಪ್ರಯತ್ನ ನಡೀತಾ ಇದೆ ಅಂತ ಗಂಭೀರ ಆರೋಪ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ: ಗೃಹ ಸಚಿವ ಪರಮೇಶ್ವರ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more