ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

Published : Mar 03, 2024, 05:55 PM ISTUpdated : Mar 03, 2024, 05:57 PM IST

ಕೈ ಸರ್ಕಾರದ ಭವಿಷ್ಯ ನಿರ್ಧರಿಸಲಿದ್ಯಾ ಲೋಕಸಭಾ ಚುನಾವಣೆ..?
2019ರ ಲೋಕಯುದ್ಧದ ಬೆನ್ನಲ್ಲೇ ಪತನಗೊಂಡಿತ್ತು ಮೈತ್ರಿ ಸರ್ಕಾರ..!    
ಲೋಕಸಂಗ್ರಾಮದ ಹೊಸ್ತಿಲಲ್ಲೇ ಮತ್ತೆ ಸಿಡಿದ ಆಪರೇಷನ್ ಬಾಂಬ್..!

50 ಕೋಟಿಯ ಆಪರೇಷನ್ ಆಟ. ಇದು ಮುಖ್ಯಮಂತ್ರಿಗಳ ಕೋಟೆಯಿಂದಲೇ ನುಗ್ಗಿ ಬಂದಿರೋ ಆಪರೇಷನ್ ಸುನಾಮಿ. ಕಾಂಗ್ರೆಸ್(Congress) ಸರ್ಕಾರವನ್ನು ಕೆಡವಲು ತೆರೆಯ ಹಿಂದೆ ಆಪರೇಷನ್ ಆಟ ಶುರುವಾಗಿದ್ಯಂತೆ. ಕೈ ಶಾಸಕರಿಗೆ 50 ಕೋಟಿಯ ಬೆಲೆ ಕಟ್ಟಲಾಗ್ತಿದ್ಯಂತೆ. ಇಂಥದ್ದೊಂದು ಆರೋಪ ಮಾಡಿರೋದು ಬೇರಾರೂ ಅಲ್ಲ, ಸ್ವತಃ ರಾಜ್ಯದ ಮುಖ್ಯಮಂತ್ರಿ. ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್ ನೀಡಲಾಗ್ತಿದ್ಯಂತೆ. ಇದನ್ನು ಯಾರೋ ಒಬ್ಬ ಶಾಸಕ ಹೇಳಿದ್ದಿದ್ರೆ ಅದು ಬೇರೆ ಮಾತು. ಆದ್ರೆ ಇಂತಹ ಒಂದು ಗಂಭೀರ ಆರೋಪ ಮಾಡಿರೋದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah). ಅತ್ತ ಬೆಂಗಳೂರಿನ(Bengaluru) ರಾಮೇಶ್ವರ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿ ರಾಜಧಾನಿಯೇ ಬೆಚ್ಚಿ ಬಿದ್ದಿದ್ರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಡಿಸಿರೋ ಆಪರೇಷನ್ ಬಾಂಬ್'ಗೆ ರಾಜ್ಯ ರಾಜಕೀಯವೇ ಬೆಚ್ಚಿ ಬಿದ್ದಿದೆ. ಇಲ್ಲಿವರೆಗೆ ಕಾಂಗ್ರೆಸ್ ಶಾಸಕರು ಬಿಜೆಪಿ(Bjp) ವಿರುದ್ಧ ಆಪರೇಷನ್ ಆರೋಪ ಮಾಡ್ತಾ ಇದ್ರು. ಆದ್ರೆ ಇದೇ ಮೊದಲ ಬಾರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವ್ರೇ ಆಪರೇಷನ್ ಬಾಂಬ್ ಸಿಡಿಸಿದ್ದಾರೆ. ಅದೂ 50 ಕೋಟಿಯ ಆಪರೇಷನ್ ಬಾಂಬ್. ಹಿಮಾಚಲ ಪ್ರದೇಶದಲ್ಲಿ ಆರು ಮಂದಿ ಕಾಂಗ್ರೆಸ್ ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ ಮತದಾನ ಮಾಡಿ, ಸರ್ಕಾರದ ಬುಡವನ್ನೇ ಅಲುಗಾಡಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ರಾಜ್ಯದಲ್ಲೂ ಅಂಥದ್ದೇ ಆಪರೇಷನ್ ಪ್ರಯತ್ನ ನಡೀತಾ ಇದೆ ಅಂತ ಗಂಭೀರ ಆರೋಪ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ: ಗೃಹ ಸಚಿವ ಪರಮೇಶ್ವರ್‌

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more