ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

ಕಾಂಗ್ರೆಸ್ ಶಾಸಕರಿಗೆ 50 ಕೋಟಿ ಆಫರ್.. ತೆರೆಯ ಹಿಂದೆ ನಡೀತಾ ಇದ್ಯಾ ಆಪರೇಷನ್ ಷಡ್ಯಂತ್ರ..?

Published : Mar 03, 2024, 05:55 PM ISTUpdated : Mar 03, 2024, 05:57 PM IST

ಕೈ ಸರ್ಕಾರದ ಭವಿಷ್ಯ ನಿರ್ಧರಿಸಲಿದ್ಯಾ ಲೋಕಸಭಾ ಚುನಾವಣೆ..?
2019ರ ಲೋಕಯುದ್ಧದ ಬೆನ್ನಲ್ಲೇ ಪತನಗೊಂಡಿತ್ತು ಮೈತ್ರಿ ಸರ್ಕಾರ..!    
ಲೋಕಸಂಗ್ರಾಮದ ಹೊಸ್ತಿಲಲ್ಲೇ ಮತ್ತೆ ಸಿಡಿದ ಆಪರೇಷನ್ ಬಾಂಬ್..!

50 ಕೋಟಿಯ ಆಪರೇಷನ್ ಆಟ. ಇದು ಮುಖ್ಯಮಂತ್ರಿಗಳ ಕೋಟೆಯಿಂದಲೇ ನುಗ್ಗಿ ಬಂದಿರೋ ಆಪರೇಷನ್ ಸುನಾಮಿ. ಕಾಂಗ್ರೆಸ್(Congress) ಸರ್ಕಾರವನ್ನು ಕೆಡವಲು ತೆರೆಯ ಹಿಂದೆ ಆಪರೇಷನ್ ಆಟ ಶುರುವಾಗಿದ್ಯಂತೆ. ಕೈ ಶಾಸಕರಿಗೆ 50 ಕೋಟಿಯ ಬೆಲೆ ಕಟ್ಟಲಾಗ್ತಿದ್ಯಂತೆ. ಇಂಥದ್ದೊಂದು ಆರೋಪ ಮಾಡಿರೋದು ಬೇರಾರೂ ಅಲ್ಲ, ಸ್ವತಃ ರಾಜ್ಯದ ಮುಖ್ಯಮಂತ್ರಿ. ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ಆಫರ್ ನೀಡಲಾಗ್ತಿದ್ಯಂತೆ. ಇದನ್ನು ಯಾರೋ ಒಬ್ಬ ಶಾಸಕ ಹೇಳಿದ್ದಿದ್ರೆ ಅದು ಬೇರೆ ಮಾತು. ಆದ್ರೆ ಇಂತಹ ಒಂದು ಗಂಭೀರ ಆರೋಪ ಮಾಡಿರೋದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah). ಅತ್ತ ಬೆಂಗಳೂರಿನ(Bengaluru) ರಾಮೇಶ್ವರ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿ ರಾಜಧಾನಿಯೇ ಬೆಚ್ಚಿ ಬಿದ್ದಿದ್ರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಡಿಸಿರೋ ಆಪರೇಷನ್ ಬಾಂಬ್'ಗೆ ರಾಜ್ಯ ರಾಜಕೀಯವೇ ಬೆಚ್ಚಿ ಬಿದ್ದಿದೆ. ಇಲ್ಲಿವರೆಗೆ ಕಾಂಗ್ರೆಸ್ ಶಾಸಕರು ಬಿಜೆಪಿ(Bjp) ವಿರುದ್ಧ ಆಪರೇಷನ್ ಆರೋಪ ಮಾಡ್ತಾ ಇದ್ರು. ಆದ್ರೆ ಇದೇ ಮೊದಲ ಬಾರಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವ್ರೇ ಆಪರೇಷನ್ ಬಾಂಬ್ ಸಿಡಿಸಿದ್ದಾರೆ. ಅದೂ 50 ಕೋಟಿಯ ಆಪರೇಷನ್ ಬಾಂಬ್. ಹಿಮಾಚಲ ಪ್ರದೇಶದಲ್ಲಿ ಆರು ಮಂದಿ ಕಾಂಗ್ರೆಸ್ ಶಾಸಕರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಡ್ಡ ಮತದಾನ ಮಾಡಿ, ಸರ್ಕಾರದ ಬುಡವನ್ನೇ ಅಲುಗಾಡಿಸಿದ ಬೆನ್ನಲ್ಲೇ, ಸಿದ್ದರಾಮಯ್ಯನವರು ರಾಜ್ಯದಲ್ಲೂ ಅಂಥದ್ದೇ ಆಪರೇಷನ್ ಪ್ರಯತ್ನ ನಡೀತಾ ಇದೆ ಅಂತ ಗಂಭೀರ ಆರೋಪ ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಬಾಂಬ್‌ ಸ್ಫೋಟ ಪ್ರಕರಣ ಭೇದಿಸುತ್ತೇವೆ, ಆರೋಪಿಯನ್ನು ಅರೆಸ್ಟ್‌ ಮಾಡ್ತೇವೆ: ಗೃಹ ಸಚಿವ ಪರಮೇಶ್ವರ್‌

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more