ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಶುರುವಾಯ್ತಾ ಟೆನ್ಷನ್‌: ಲಿಂಗಾಯತ ಸಮುದಾಯ ಕ್ಷಮೆ ಕೇಳಿದ ಸಿದ್ದು

May 5, 2023, 12:05 PM IST

ಮೈಸೂರು: ವರುಣ ಕ್ಷೇತ್ರದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಲಿಂಗಾಯತ ಮತಗಳು ಇವೆ. ಹೀಗಾಗಿ ಇದೀಗ ಸಿದ್ದರಾಮಯ್ಯಗೆ ಟೆನ್ಷನ್‌ ಶುರುವಾಯ್ತಾ ಎಂಬ ಅನುಮಾನ ಮೂಡಿದೆ. ಯಾಕಂದ್ರೆ ಸಿದ್ದರಾಮಯ್ಯ ಲಿಂಗಾಯತ ಭ್ರಷ್ಟ ಸಿಎಂ ಹೇಳಿಕೆ ಎಲ್ಲೆಡೆ ಚರ್ಚೆಗೆ ಕಾರಣವಾಗಿತ್ತು. ಇದು ಇದೀಗ ವರುಣ ಚಿತ್ರಣವನ್ನು ಬದಲಿಸುತ್ತೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಲಿಂಗಾಯತರ ಮನವೊಲಿಸುವ ಕೆಲಸವನ್ನು ಸಿದ್ದರಾಮಯ್ಯ ಈಗಾಗಲೇ ಮಾಡುತ್ತಿದ್ದಾರೆ. ಅಲ್ಲದೇ ವರುಣದ ರಾಂಪುರ ಗ್ರಾಮದಲ್ಲಿ ಲಿಂಗಾಯತರ ಕ್ಷಮೆಯನ್ನು ಸಿದ್ದರಾಮಯ್ಯ ಕೇಳಿದ್ದಾರೆ. ಈ ಮೂಲಕ ವರುಣದಲ್ಲಿ ಚುನಾವಣಾ ಫೈಟ್‌ ಟೈಟ್ ಆಗಿದೆ ಎಂಬುದು ಸ್ಪಷ್ಟವಾಗಿದೆ.

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಪರ ತಾರೆಯರ ಹಿಂಡು: ಶಿವರಾಜ್‌ ಕುಮಾರ್ ನೋಡಲು ಅಭಿಮಾನಿಗಳ ದಂಡು