ಎಲ್ಲಿ ಸ್ಪರ್ಧಿಸುತ್ತಾರೆ ಮಾಜಿ ಸಿಎಂ ಸಿದ್ದರಾಮಣ್ಣ? ಚಾಮರಾಜನಗರದತ್ತ ವಿ ಸೋಮಣ್ಣ!

ಎಲ್ಲಿ ಸ್ಪರ್ಧಿಸುತ್ತಾರೆ ಮಾಜಿ ಸಿಎಂ ಸಿದ್ದರಾಮಣ್ಣ? ಚಾಮರಾಜನಗರದತ್ತ ವಿ ಸೋಮಣ್ಣ!

Published : Mar 21, 2023, 11:21 PM IST

ಮಾ.23ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್, ಬೆಂಬಲಿಗರ ಒತ್ತಡಕ್ಕೆ ಮಣಿದು ಕೋಲಾರದಲ್ಲಿ ಅಖಾಡಕ್ಕಿಳಿಯುತ್ತಾರಾ ಸಿದ್ದು, ಚಾಮರಾಜನಗರದಲ್ಲಿ ನಿಲ್ಲಲು ಹೈಕಮಾಂಡ್ ಸೂಚನೆ, ಸೋಮಣ್ಣ ಸ್ಫೋಟಕ ಮಾತು, ಅಮೃತಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರ ಹರಸಾಹಸ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ಕಂಪ್ಲೀಟ್ ಪ್ಯಾಕೇಜ್ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುತ್ತಿಲ್ಲ ಅನ್ನೋ ಮಾತು ಹೊರಬೀಳುತ್ತಿದ್ದಂತೆ ಇದೀಗ ಕೋಲಾರದ ಅಭಿಮಾನಿಗಳಿಗೆ ನಿರಾಸೆಯಾಗಿದೆ.  ಇಂದು ಸಿದ್ದು ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು, ಕೋಲಾರದಿಂದಲೇ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ.ಕೋಲಾರ, ಬಾದಮಿ, ವರುಣಾ ಸೇರಿದಂತೆ ಕೆಲ ಕ್ಷೇತ್ರಗಳಿಂದ ಸಿದ್ದು ಸ್ಪರ್ಧೆ ಅನ್ನೋ ಮಾತು ಕೇಳಿಬರುತ್ತಿದೆ. ಇತ್ತ ಕೋಲಾರದ ಬೆಂಬಲಿಗರು ಸಿದ್ದು ಬರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಸ್ವತಂತ್ರರು. ಯಾವ ಕ್ಷೇತ್ರದಲ್ಲಿ ನಿಂತರೂ ಕಾಂಗ್ರೆಸ್ ಅವರಿಗೆ ಅವಕಾಶ ಮಾಡಿಕೊಡಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಮಹಾನ್ ನಾಯಕ ಸಿದ್ದರಾಮಯ್ಯನವರಿಗೆ ಈ ಪರಿಸ್ಥಿತಿ ಬಂದಿದೆ ಎಂದು ನನಗೆ ಮಾತ್ರವಲ್ಲ ಹಲವರಿಗೆ ಅನುಕಂಪ ಬಂದಿದೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಬಿಜೆಪಿ ನಾಯಕ ವಿ ಸೋಮಣ್ಣ ಪಕ್ಷ ಬಿಡಲಿದ್ದಾರೆ ಅನ್ನೋ ಮಾತುಗಳು ತಣ್ಣಗಾದ ಬೆನ್ನಲ್ಲೇ ಇದೀಗ ಹೊಸ ವಿಚಾರ ಮುನ್ನಲೆಗೆ ಬಂದಿದೆ. ಚಾಮರಾಜನಗರದಿಂದ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದಿದ್ದಾರೆ. ಇಷ್ಟೇ ಅಲ್ಲ 6 ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇನೆ ಎಂದು ಸೋಮಣ್ಣ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more