ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

Published : Dec 18, 2023, 12:21 PM IST

ಇನ್ನೂ ಘೋಷಣೆಯಾಗದ ನಿಗಮ ಮಂಡಳಿ ಅಧ್ಯಕ್ಷರ ನೇಮಕ
ಲಿಸ್ಟ್ ಹೈಕಮಾಂಡ್‌ಗೆ ಕಳಿಸಿದ್ರೂ ಇನ್ನೂ ಅಂತಿಮವಾಗದ ಪಟ್ಟಿ
ಶಾಸಕರ ಬೇಸರದಿಂದ ಲೋಕಸಭಾ ಚುನಾವಣೆಗೆ ಎಫೆಕ್ಟ್ ಆತಂಕ

ಇಂದಿನಿಂದ ಮೂರು ದಿನ ಸಿಎಂ, ಡಿಸಿಎಂ ದೆಹಲಿ ಪ್ರವಾಸ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಹೋಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್(DK shivakumar) ಅಲ್ಲಿ ಕಾಂಗ್ರೆಸ್ ಹೈಕಮಾಂಡ್(Congress Highcommand) ನಾಯಕರ ಭೇಟಿ ಮಾಡಲಿದ್ದಾರೆ. ಜೊತೆಗೆ ಕೇಂದ್ರ ಸಚಿವರನ್ನೂ ಸಹ ಭೇಟಿಯಾಗಲಿದ್ದಾರೆ. ಪಿಎಂ ಸೇರಿ ಕೇಂದ್ರ ಸಚಿವರ ಭೇಟಿಗೆ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವಕಾಶ ನೀಡಿದ್ದಾರೆ. ಡಿಸೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ಭೇಟಿಗೆ ಸಮಯಾವಕಾಶ ನಿಗದಿಯಾಗಿದೆ. ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ನಾಯಕರು ಮೋದಿ ಭೇಟಿಯಾಗಲಿದ್ದಾರೆ. ನಮಗೆ ಸಮಯ ಕೊಡ್ತಿಲ್ಲ ಎಂದಿಲ್ಲ ಆರೋಪವನ್ನು ಸಿಎಂ ಮಾಡಿದ್ದರು. ಭೇಟಿಗೆ ಅವಕಾಶ ಕೊಡಿಸಿ ಎಂದು ಬಿಜೆಪಿ ನಾಯಕರನ್ನು ಕಿಚಾಯಿಸಿದ್ದರು. ಕೊನೆಗೂ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಈ ಭೇಟಿಯಲ್ಲಿ ರಾಜ್ಯದಲ್ಲಿ ಬರಗಾಲ ಸಮಸ್ಯೆ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ರಾಜ್ಯಕ್ಕೆ ಬರಬೇಕಾದ ಎನ್ಡಿಆರ್ಎಫ್ ಹಣ ಬಿಡುಗಡೆಗೆ ಮನವಿ ಮಾಡುವ ಸಾಧ್ಯತೆ ಇದೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಬಹುದು.

ಇದನ್ನೂ ವೀಕ್ಷಿಸಿ:  ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more