ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

Published : Nov 29, 2024, 01:00 PM IST

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಪಕ್ಷವು ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ. ಶಿವಕುಮಾರ್ ಅವರ ಅಧ್ಯಕ್ಷ ಸ್ಥಾನದ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸಚಿವ ಸಂಪುಟದ ಪುನಾರಚನೆಯ ಸಾಧ್ಯತೆಗಳೊಂದಿಗೆ ಈ ಚರ್ಚೆಗಳು ಮತ್ತಷ್ಟು ಗರಿಗೆದರಿವೆ.

ಕರುನಾಡ ಕಾಂಗ್ರೆಸ್‌ಗೆ ಅವರೇ ಸೇನಾಪತಿ. ಅವರ ಹೆಗಲಿಗೆ ಕೈ ಪಕ್ಷದ ಜವಾಬ್ದಾರಿ ಹೋದ ಕ್ಷಣದಿಂದ ಕಾಂಗ್ರೆಸ್ ಹಿಂತಿರುಗಿ ನೋಡಿದ್ದೇ ಇಲ್ಲ. ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಕೂತು ಎಲೆಕ್ಷನ್ ರಣಕಣದಲ್ಲಿ ಸಾಲು ಸಾಲು ಗೆಲುವು ತಂದು ಕೊಟ್ಟವರು ಅವರು. ಆದರೀಗ ಅದೇ ಅಧ್ಯಕ್ಷ ಪಟ್ಟ ಬಿಟ್ಟು ಕೊಡ್ತಾರಾ ಪ್ರಚಂಡ ಸೇನಾಪತಿ ಎಂಬ ಚರ್ಚೆಗಳು ಶುರುವಾಗಿವೆ. ಡಿ.ಕೆ. ಶಿವಕುಮಾರ್ ಅವರು ತ್ಯಾಗದ ಮಾತನಾಡಿ, ಯಾರನ್ನ ಟಾರ್ಗೆಟ್ ಮಾಡ್ಕೊಂಡು ಬಾಣ ಬಿಟ್ಟಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಮೂರು ವಿಧಾನಸಭೆಗಳಲ್ಲಿ ನಡೆದ ಉಪ ಚುನಾವಣೆಯನ್ನು ಕಾಂಗ್ರೆಸ್ ಗೆದ್ದು ಬೀಗಿದೆ. ಇಲ್ಲಿಗೆ ಎಲ್ಲಾ ಸವಾಲು ಮುಗಿದಿಲ್ಲ, ಅಸಲಿಗೆ ಸದ್ಯದಲ್ಲಿಯೇ ಮತ್ತೊಂದು ಸವಾಲು ಎದುರಾಗಿದೆ. ಆ ಸವಾಲೇ ಡಿ.ಕೆ.ಶಿವಕುಮಾರ್ ಅವರ ಕುರ್ಚಿಯನ್ನೇ ಸೇಫ್ ಮಾಡಬಹುದು ಎನ್ನಲಾಗುತ್ತಿದೆ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷರೇ ಬದಲಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಸದ್ಯಕ್ಕೆ ಅಧ್ಯಕ್ಷರ ಬದಲಾವಣೆ ಡೌಟ್ ಅಂತಲೇ ಹೇಳಲಾಗುತ್ತಿದೆ. ಏಕೆಂದರೆ, ಈಗಾಗಲೇ ಅನೇಕ ಸವಾಲುಗಳನ್ನ ರಾಜ್ಯಾಧ್ಯಕ್ಷರಾಗಿ ಡಿಕೆಶಿ ಮೆಟ್ಟಿ ನಿಂತಿದ್ದಾರೆ. ಮುಂದಿರೋ ಮತ್ತೊಂದು ಸವಾಲನ್ನು ಸಹ ಅವರ ನೇತೃತ್ವದಲ್ಲಿಯೇ ಎದುರಿಸೋಣ ಎನ್ನುವ ತೀರ್ಮಾನವನ್ನ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಬಹುದು.

ಇದರ ಜೊತೆಗೆ ಸರ್ಕಾರದಲ್ಲಿ ಸಚಿವ ಸಂಪುಟ ಬದಲಾವಣೆ ಚರ್ಚೆ ಶುರುವಾಗುತ್ತಿದೆ. ಇದರೊಂದಿಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾತು ಸಹ ಬರ್ತಿದೆ. ಇಲ್ಲಿ ಸಿದ್ದರಾಮಯ್ಯ ಬಣ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯೋ ಪ್ಲಾನ್ ಮಾಡಿದೆ ಅನ್ನೋ ಅನುಮಾನ ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಇಬ್ಬರೂ ದೆಹಲಿಗೆ ಹೋಗಿದ್ದಾರೆ. ಹೈಕಮಾಂಡ್ ಏನ್ ಹೇಳುತ್ತೋ ಗೊತ್ತಿಲ್ಲ. ಸಂಪುಟ ಸರ್ಜರಿ ಮಾಡಿ, ಅಧ್ಯಕ್ಷರಾಗಿ ನೀವೇ ಮುಂದುವರೆಯಿರಿ ಎನ್ನಬಹುದು.. ಅಥವಾ ಸಚಿವ ಸಂಪುಟ ಬದಲಾವಣೆ ಜೊತೆಗೆ, ಅಧ್ಯಕ್ಷರನ್ನೂ ಬದಲಾಯಿಸಿ ಬಿಡಬಹುದು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more