ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

Published : Nov 29, 2024, 01:00 PM IST

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಪಕ್ಷವು ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ. ಶಿವಕುಮಾರ್ ಅವರ ಅಧ್ಯಕ್ಷ ಸ್ಥಾನದ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸಚಿವ ಸಂಪುಟದ ಪುನಾರಚನೆಯ ಸಾಧ್ಯತೆಗಳೊಂದಿಗೆ ಈ ಚರ್ಚೆಗಳು ಮತ್ತಷ್ಟು ಗರಿಗೆದರಿವೆ.

ಕರುನಾಡ ಕಾಂಗ್ರೆಸ್‌ಗೆ ಅವರೇ ಸೇನಾಪತಿ. ಅವರ ಹೆಗಲಿಗೆ ಕೈ ಪಕ್ಷದ ಜವಾಬ್ದಾರಿ ಹೋದ ಕ್ಷಣದಿಂದ ಕಾಂಗ್ರೆಸ್ ಹಿಂತಿರುಗಿ ನೋಡಿದ್ದೇ ಇಲ್ಲ. ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಕೂತು ಎಲೆಕ್ಷನ್ ರಣಕಣದಲ್ಲಿ ಸಾಲು ಸಾಲು ಗೆಲುವು ತಂದು ಕೊಟ್ಟವರು ಅವರು. ಆದರೀಗ ಅದೇ ಅಧ್ಯಕ್ಷ ಪಟ್ಟ ಬಿಟ್ಟು ಕೊಡ್ತಾರಾ ಪ್ರಚಂಡ ಸೇನಾಪತಿ ಎಂಬ ಚರ್ಚೆಗಳು ಶುರುವಾಗಿವೆ. ಡಿ.ಕೆ. ಶಿವಕುಮಾರ್ ಅವರು ತ್ಯಾಗದ ಮಾತನಾಡಿ, ಯಾರನ್ನ ಟಾರ್ಗೆಟ್ ಮಾಡ್ಕೊಂಡು ಬಾಣ ಬಿಟ್ಟಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಮೂರು ವಿಧಾನಸಭೆಗಳಲ್ಲಿ ನಡೆದ ಉಪ ಚುನಾವಣೆಯನ್ನು ಕಾಂಗ್ರೆಸ್ ಗೆದ್ದು ಬೀಗಿದೆ. ಇಲ್ಲಿಗೆ ಎಲ್ಲಾ ಸವಾಲು ಮುಗಿದಿಲ್ಲ, ಅಸಲಿಗೆ ಸದ್ಯದಲ್ಲಿಯೇ ಮತ್ತೊಂದು ಸವಾಲು ಎದುರಾಗಿದೆ. ಆ ಸವಾಲೇ ಡಿ.ಕೆ.ಶಿವಕುಮಾರ್ ಅವರ ಕುರ್ಚಿಯನ್ನೇ ಸೇಫ್ ಮಾಡಬಹುದು ಎನ್ನಲಾಗುತ್ತಿದೆ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷರೇ ಬದಲಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಸದ್ಯಕ್ಕೆ ಅಧ್ಯಕ್ಷರ ಬದಲಾವಣೆ ಡೌಟ್ ಅಂತಲೇ ಹೇಳಲಾಗುತ್ತಿದೆ. ಏಕೆಂದರೆ, ಈಗಾಗಲೇ ಅನೇಕ ಸವಾಲುಗಳನ್ನ ರಾಜ್ಯಾಧ್ಯಕ್ಷರಾಗಿ ಡಿಕೆಶಿ ಮೆಟ್ಟಿ ನಿಂತಿದ್ದಾರೆ. ಮುಂದಿರೋ ಮತ್ತೊಂದು ಸವಾಲನ್ನು ಸಹ ಅವರ ನೇತೃತ್ವದಲ್ಲಿಯೇ ಎದುರಿಸೋಣ ಎನ್ನುವ ತೀರ್ಮಾನವನ್ನ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಬಹುದು.

ಇದರ ಜೊತೆಗೆ ಸರ್ಕಾರದಲ್ಲಿ ಸಚಿವ ಸಂಪುಟ ಬದಲಾವಣೆ ಚರ್ಚೆ ಶುರುವಾಗುತ್ತಿದೆ. ಇದರೊಂದಿಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾತು ಸಹ ಬರ್ತಿದೆ. ಇಲ್ಲಿ ಸಿದ್ದರಾಮಯ್ಯ ಬಣ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯೋ ಪ್ಲಾನ್ ಮಾಡಿದೆ ಅನ್ನೋ ಅನುಮಾನ ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಇಬ್ಬರೂ ದೆಹಲಿಗೆ ಹೋಗಿದ್ದಾರೆ. ಹೈಕಮಾಂಡ್ ಏನ್ ಹೇಳುತ್ತೋ ಗೊತ್ತಿಲ್ಲ. ಸಂಪುಟ ಸರ್ಜರಿ ಮಾಡಿ, ಅಧ್ಯಕ್ಷರಾಗಿ ನೀವೇ ಮುಂದುವರೆಯಿರಿ ಎನ್ನಬಹುದು.. ಅಥವಾ ಸಚಿವ ಸಂಪುಟ ಬದಲಾವಣೆ ಜೊತೆಗೆ, ಅಧ್ಯಕ್ಷರನ್ನೂ ಬದಲಾಯಿಸಿ ಬಿಡಬಹುದು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more