ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

ಡಿಕೆಶಿ ಸೇನಾಪತಿ ಹುದ್ದೆ ಮೇಲೆ ಕಣ್ಣಿಟ್ಟ ಸಿದ್ದರಾಮಯ್ಯ ಬಣ; ಇಲ್ಲಿದೆ ರಾಜಕೀಯ ಒಳಸಂಚು!

Published : Nov 29, 2024, 01:00 PM IST

ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಪಕ್ಷವು ಉಪಚುನಾವಣೆಗಳಲ್ಲಿ ಗೆಲುವು ಸಾಧಿಸಿದೆ. ಶಿವಕುಮಾರ್ ಅವರ ಅಧ್ಯಕ್ಷ ಸ್ಥಾನದ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಸಚಿವ ಸಂಪುಟದ ಪುನಾರಚನೆಯ ಸಾಧ್ಯತೆಗಳೊಂದಿಗೆ ಈ ಚರ್ಚೆಗಳು ಮತ್ತಷ್ಟು ಗರಿಗೆದರಿವೆ.

ಕರುನಾಡ ಕಾಂಗ್ರೆಸ್‌ಗೆ ಅವರೇ ಸೇನಾಪತಿ. ಅವರ ಹೆಗಲಿಗೆ ಕೈ ಪಕ್ಷದ ಜವಾಬ್ದಾರಿ ಹೋದ ಕ್ಷಣದಿಂದ ಕಾಂಗ್ರೆಸ್ ಹಿಂತಿರುಗಿ ನೋಡಿದ್ದೇ ಇಲ್ಲ. ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಕೂತು ಎಲೆಕ್ಷನ್ ರಣಕಣದಲ್ಲಿ ಸಾಲು ಸಾಲು ಗೆಲುವು ತಂದು ಕೊಟ್ಟವರು ಅವರು. ಆದರೀಗ ಅದೇ ಅಧ್ಯಕ್ಷ ಪಟ್ಟ ಬಿಟ್ಟು ಕೊಡ್ತಾರಾ ಪ್ರಚಂಡ ಸೇನಾಪತಿ ಎಂಬ ಚರ್ಚೆಗಳು ಶುರುವಾಗಿವೆ. ಡಿ.ಕೆ. ಶಿವಕುಮಾರ್ ಅವರು ತ್ಯಾಗದ ಮಾತನಾಡಿ, ಯಾರನ್ನ ಟಾರ್ಗೆಟ್ ಮಾಡ್ಕೊಂಡು ಬಾಣ ಬಿಟ್ಟಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ರಾಜ್ಯದಲ್ಲಿ ಮೂರು ವಿಧಾನಸಭೆಗಳಲ್ಲಿ ನಡೆದ ಉಪ ಚುನಾವಣೆಯನ್ನು ಕಾಂಗ್ರೆಸ್ ಗೆದ್ದು ಬೀಗಿದೆ. ಇಲ್ಲಿಗೆ ಎಲ್ಲಾ ಸವಾಲು ಮುಗಿದಿಲ್ಲ, ಅಸಲಿಗೆ ಸದ್ಯದಲ್ಲಿಯೇ ಮತ್ತೊಂದು ಸವಾಲು ಎದುರಾಗಿದೆ. ಆ ಸವಾಲೇ ಡಿ.ಕೆ.ಶಿವಕುಮಾರ್ ಅವರ ಕುರ್ಚಿಯನ್ನೇ ಸೇಫ್ ಮಾಡಬಹುದು ಎನ್ನಲಾಗುತ್ತಿದೆ. ಹೀಗಾಗಿ, ಕೆಪಿಸಿಸಿ ಅಧ್ಯಕ್ಷರೇ ಬದಲಾಗುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ, ಸದ್ಯಕ್ಕೆ ಅಧ್ಯಕ್ಷರ ಬದಲಾವಣೆ ಡೌಟ್ ಅಂತಲೇ ಹೇಳಲಾಗುತ್ತಿದೆ. ಏಕೆಂದರೆ, ಈಗಾಗಲೇ ಅನೇಕ ಸವಾಲುಗಳನ್ನ ರಾಜ್ಯಾಧ್ಯಕ್ಷರಾಗಿ ಡಿಕೆಶಿ ಮೆಟ್ಟಿ ನಿಂತಿದ್ದಾರೆ. ಮುಂದಿರೋ ಮತ್ತೊಂದು ಸವಾಲನ್ನು ಸಹ ಅವರ ನೇತೃತ್ವದಲ್ಲಿಯೇ ಎದುರಿಸೋಣ ಎನ್ನುವ ತೀರ್ಮಾನವನ್ನ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳಬಹುದು.

ಇದರ ಜೊತೆಗೆ ಸರ್ಕಾರದಲ್ಲಿ ಸಚಿವ ಸಂಪುಟ ಬದಲಾವಣೆ ಚರ್ಚೆ ಶುರುವಾಗುತ್ತಿದೆ. ಇದರೊಂದಿಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾತು ಸಹ ಬರ್ತಿದೆ. ಇಲ್ಲಿ ಸಿದ್ದರಾಮಯ್ಯ ಬಣ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯೋ ಪ್ಲಾನ್ ಮಾಡಿದೆ ಅನ್ನೋ ಅನುಮಾನ ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿದೆ. ಸಿಎಂ, ಡಿಸಿಎಂ ಇಬ್ಬರೂ ದೆಹಲಿಗೆ ಹೋಗಿದ್ದಾರೆ. ಹೈಕಮಾಂಡ್ ಏನ್ ಹೇಳುತ್ತೋ ಗೊತ್ತಿಲ್ಲ. ಸಂಪುಟ ಸರ್ಜರಿ ಮಾಡಿ, ಅಧ್ಯಕ್ಷರಾಗಿ ನೀವೇ ಮುಂದುವರೆಯಿರಿ ಎನ್ನಬಹುದು.. ಅಥವಾ ಸಚಿವ ಸಂಪುಟ ಬದಲಾವಣೆ ಜೊತೆಗೆ, ಅಧ್ಯಕ್ಷರನ್ನೂ ಬದಲಾಯಿಸಿ ಬಿಡಬಹುದು.

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more