ರಾಜ್ಯ Vsಕೇಂದ್ರ..ಏನಿದು ನ್ಯಾಯ-ಅನ್ಯಾಯದ ಸಮರ..? ಕೇಂದ್ರ ಸರ್ಕಾರದ ವಿರುದ್ಧ ಸಿದ್ದು ಸಂಗ್ರಾಮ..ಕೈ ರಣಕಹಳೆ..!

ರಾಜ್ಯ Vsಕೇಂದ್ರ..ಏನಿದು ನ್ಯಾಯ-ಅನ್ಯಾಯದ ಸಮರ..? ಕೇಂದ್ರ ಸರ್ಕಾರದ ವಿರುದ್ಧ ಸಿದ್ದು ಸಂಗ್ರಾಮ..ಕೈ ರಣಕಹಳೆ..!

Published : Feb 06, 2024, 06:35 PM IST

ಲೆಕ್ಕರಾಮಯ್ಯ ಬಿಚ್ಚಿಟ್ಟರು ತೆರಿಗೆ ಲೆಕ್ಕದ ರೋಚಕ ರಹಸ್ಯ..!
"ಸಿದ್ದು ದಿಲ್ಲಿ ಚಲೋ", ಕೇಂದ್ರದ ವಿರುದ್ಧ ಸಿದ್ದು ಯುದ್ಧ..!
ಬುಧವಾರ ದೆಹಲಿಯಲ್ಲಿ ಸಿದ್ದು ಸೇನೆಯ ಬೃಹತ್ ಪ್ರತಿಭಟನೆ..!
"ಜಂತರ್ ಮಂತರ್"ನಲ್ಲಿ ನಡೆಯಲಿದೆ ಕೈ ಶಕ್ತಿ ಪ್ರದರ್ಶನ..!

ಇದು ಲೆಕ್ಕರಾಮಯ್ಯ ಖ್ಯಾತಿಯ ಸಿದ್ದರಾಮಯ್ಯನವರು ಬಿಚ್ಚಿಟ್ಟಿರೋ ತೆರಿಗೆ ಲೆಕ್ಕ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ(Karnataka) ಅನ್ಯಾಯವಾಗ್ತಿದೆ ಅಂತ ಆರೋಪಿಸಿ ಸಿದ್ದು ಮೊಳಗಿಸಿರೋ ಲೆಕ್ಕಸಮರವಿದು. ತೆರಿಗೆ ಪಾಲು ಹಂಚಿಕೆಯಲ್ಲಿ ಮೋದಿ(Narendra Modi) ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡ್ತಿದೆ ಅಂತ ರಾಜ್ಯ ಕಾಂಗ್ರೆಸ್(Congress) ಸರ್ಕಾರ ಹಾದಿ ಬೀದಿಯಲ್ಲಿ ಆರೋಪಿಸ್ತಾ ಇದೆ. ಕೇಂದ್ರ ಬಜೆಟ್ ಮಂಡನೆಯ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಇಂಥದ್ದೊಂದು ಆರೋಪ ಕೇಳಿ ಬಂದಿದೆ. ಆರೋಪ ಮಾಡಿರೋದಷ್ಟೇ ಅಲ್ಲ, ಕೇಂದ್ರದ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬುಧವಾರ ದಿಲ್ಲಿ ಚಲೋ ನಡೆಸಲಿದೆ. ಕಾಂಗ್ರೆಸ್‌ನ ದಿಲ್ಲಿ ಚಲೋ ಸಮರದ ಸೇನಾ ದಂಡನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah). ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗ್ತಿದೆ ಅನ್ನೋ ಆರೋಪ ಇವತ್ತು ನಿನ್ನೆಯದ್ದಲ್ಲ. ಕಳೆದ ಕೆಲ ವರ್ಷಗಳಿಂದ ಕೇಂದ್ರ ಸರ್ಕಾರದ ವಿರುದ್ಧ ಇಂಥದ್ದೊಂದು ಆರೋಪ ಕೇಳಿ ಬರ್ತಾನೇ ಇದೆ. ಆಗೆಲ್ಲಾ ಹಾದಿ ಬೀದಿ ಚರ್ಚೆಗೆ, ಸೋಷಿಯಲ್ ಮೀಡಿಯಾ ವಾಗ್ವಾದಕ್ಕೆ, ರಾಜಕೀಯ ವಾಕ್ಸಮರಗಳಿಗಷ್ಟೇ ಸೀಮಿತವಾಗಿದ್ದ ಈ ವಿಷ್ಯ, ಈಗ ರಾಜಧಾನಿ ದೆಹಯಲ್ಲಿ ಪ್ರತಿಧ್ವನಿಸೋದಕ್ಕೆ ರೆಡಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar) ನೇತೃತ್ವದಲ್ಲಿ ಕಾಂಗ್ರೆಸ್'ನ ಎಲ್ಲಾ ಶಾಸಕರು ಬುಧವಾರ ದೆಹಲಿಯ ಜಂತರ್ ಮಂತರ್'ನಲ್ಲಿ ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್ ಪಕ್ಷದ ಭವಿಷ್ಯ ನುಡಿದ ಮೋದಿ..! 2024ರ ಚುನಾವಣೆ ಬಗ್ಗೆ ಪ್ರಧಾನಿ ಹೇಳಿದ್ದೇನು..?

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more