Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Published : Mar 25, 2022, 04:43 PM IST

ಸಿದ್ಧರಾಮಯ್ಯ ಅವರಿಂದ ವೋಟ್ ಬ್ಯಾಂಕ್ ರಾಜಕಾರಣ

ಹಿಜಾಬ್ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆ ತಂದಿರುವುದು ತಪ್ಪು

ಸ್ವಾಮೀಜಿಗಳ ವೇಷಭೂಷಣವನ್ನು ಹೋಲಿಸಿ ಮಾತನಾಡಿದ್ದ ಸಿದ್ಧರಾಮಯ್ಯ

ಬೆಂಗಳೂರು (ಮಾ. 25): ಸ್ವಾಮೀಜಿಗಳು (Swamiji) ತಲೆಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರಿತಿ ಮುಸ್ಲಿಂ ಹೆಣ್ಣುಮಕ್ಕಳಿಗೂ ಅವಕಾಶ ನೀಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Former CM Siddaramaiah ) ವಿರುದ್ಧ ಆಡಳಿತ ಪಕ್ಷ ಬಿಜೆಪಿಯ (BJP) ನಾಯಕರು ತಿರುಗಿಬಿದ್ದಿದ್ದಾರೆ. ಸಿದ್ಧರಾಮಯ್ಯ ಈ ವಿಚಾರದಲ್ಲಿ ಸ್ವಾಮೀಜಿಗಳ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh), ಸ್ವಾಮೀಜಿಗಳುತಲೆಗೆ ಬಟ್ಟೆ ಹಾಕ್ತಾರೆ, ಅದಕ್ಕೆ ಮುಸ್ಲಿಂ ಹುಡುಗಿಯರಿಗೂ ಅದೇ ರೀತಿ ಅವಕಾಶ ನೀಡಿ ಅಂತಾ ಹೇಳ್ತಿದ್ದಾರೆ. ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಟೋಪಿ ಹಾಕ್ತಾರೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಉದ್ದುದ್ದ ಗಡ್ಡ ಬಿಟ್ಟುಕೊಂಡು ಬರಲು ಅನುಮತಿ ಕೊಡೋಕೆ ಸಾಧ್ಯವಾಗುತ್ತಾ? ಬಹುಶಃ ಅವರು ಹಾಗೇ ಹೇಳಿಲ್ಲ ಅನ್ನೋದೆ ನಮ್ಮ ಪುಣ್ಯ. ಚುನಾವಣೆ ಆದ ನಂತರ ಸಿದ್ಧರಾಮಯ್ಯ ಹತಾಶರಾಗಬಹುದು ಎಂದು ಅಂದುಕೊಂಡಿದ್ದೆ. ಆದರೆ, ಅವರ ಈ ಮಾತುಗಳನ್ನು ಕೇಳಿದರೆ, ಈಗಲೇ ಹತಾಶರಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

ಹಿಜಾಬ್ ನಂಥ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆದು ತಂದಿರುವುದೇ ತಪ್ಪು. ಸಿದ್ಧರಾಮಯ್ಯ ಅವರಂಥ ಹಿರಿಯ ರಾಜಕಾರಣಿ ಆಡುವ ಮಾತುಗಳಲ್ಲ. ಅವರು ಸ್ವಾಮೀಜಿಗಳ ಕ್ಷಮೆ ಕೇಳಬೇಕು. ಇಂಥದ್ದೊಂದು ಮಾತುಗಳನ್ನು ಹೇಳುವ ಮೂಲಕ ಅಗತ್ಯವಿಲ್ಲ ವೋಟ್ ಬ್ಯಾಂಕ್ ರಾಜಕಾರಣವನ್ನು ಮಾಡುವುದನ್ನು ಅವರು ಬಿಡಬೇಕು ಎಂದು ಬಿಸಿ ನಾಗೇಶ್ ಹೇಳಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more