Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Published : Mar 25, 2022, 04:43 PM IST

ಸಿದ್ಧರಾಮಯ್ಯ ಅವರಿಂದ ವೋಟ್ ಬ್ಯಾಂಕ್ ರಾಜಕಾರಣ

ಹಿಜಾಬ್ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆ ತಂದಿರುವುದು ತಪ್ಪು

ಸ್ವಾಮೀಜಿಗಳ ವೇಷಭೂಷಣವನ್ನು ಹೋಲಿಸಿ ಮಾತನಾಡಿದ್ದ ಸಿದ್ಧರಾಮಯ್ಯ

ಬೆಂಗಳೂರು (ಮಾ. 25): ಸ್ವಾಮೀಜಿಗಳು (Swamiji) ತಲೆಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರಿತಿ ಮುಸ್ಲಿಂ ಹೆಣ್ಣುಮಕ್ಕಳಿಗೂ ಅವಕಾಶ ನೀಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Former CM Siddaramaiah ) ವಿರುದ್ಧ ಆಡಳಿತ ಪಕ್ಷ ಬಿಜೆಪಿಯ (BJP) ನಾಯಕರು ತಿರುಗಿಬಿದ್ದಿದ್ದಾರೆ. ಸಿದ್ಧರಾಮಯ್ಯ ಈ ವಿಚಾರದಲ್ಲಿ ಸ್ವಾಮೀಜಿಗಳ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh), ಸ್ವಾಮೀಜಿಗಳುತಲೆಗೆ ಬಟ್ಟೆ ಹಾಕ್ತಾರೆ, ಅದಕ್ಕೆ ಮುಸ್ಲಿಂ ಹುಡುಗಿಯರಿಗೂ ಅದೇ ರೀತಿ ಅವಕಾಶ ನೀಡಿ ಅಂತಾ ಹೇಳ್ತಿದ್ದಾರೆ. ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಟೋಪಿ ಹಾಕ್ತಾರೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಉದ್ದುದ್ದ ಗಡ್ಡ ಬಿಟ್ಟುಕೊಂಡು ಬರಲು ಅನುಮತಿ ಕೊಡೋಕೆ ಸಾಧ್ಯವಾಗುತ್ತಾ? ಬಹುಶಃ ಅವರು ಹಾಗೇ ಹೇಳಿಲ್ಲ ಅನ್ನೋದೆ ನಮ್ಮ ಪುಣ್ಯ. ಚುನಾವಣೆ ಆದ ನಂತರ ಸಿದ್ಧರಾಮಯ್ಯ ಹತಾಶರಾಗಬಹುದು ಎಂದು ಅಂದುಕೊಂಡಿದ್ದೆ. ಆದರೆ, ಅವರ ಈ ಮಾತುಗಳನ್ನು ಕೇಳಿದರೆ, ಈಗಲೇ ಹತಾಶರಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

ಹಿಜಾಬ್ ನಂಥ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆದು ತಂದಿರುವುದೇ ತಪ್ಪು. ಸಿದ್ಧರಾಮಯ್ಯ ಅವರಂಥ ಹಿರಿಯ ರಾಜಕಾರಣಿ ಆಡುವ ಮಾತುಗಳಲ್ಲ. ಅವರು ಸ್ವಾಮೀಜಿಗಳ ಕ್ಷಮೆ ಕೇಳಬೇಕು. ಇಂಥದ್ದೊಂದು ಮಾತುಗಳನ್ನು ಹೇಳುವ ಮೂಲಕ ಅಗತ್ಯವಿಲ್ಲ ವೋಟ್ ಬ್ಯಾಂಕ್ ರಾಜಕಾರಣವನ್ನು ಮಾಡುವುದನ್ನು ಅವರು ಬಿಡಬೇಕು ಎಂದು ಬಿಸಿ ನಾಗೇಶ್ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more