Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Published : Mar 25, 2022, 04:43 PM IST

ಸಿದ್ಧರಾಮಯ್ಯ ಅವರಿಂದ ವೋಟ್ ಬ್ಯಾಂಕ್ ರಾಜಕಾರಣ

ಹಿಜಾಬ್ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆ ತಂದಿರುವುದು ತಪ್ಪು

ಸ್ವಾಮೀಜಿಗಳ ವೇಷಭೂಷಣವನ್ನು ಹೋಲಿಸಿ ಮಾತನಾಡಿದ್ದ ಸಿದ್ಧರಾಮಯ್ಯ

ಬೆಂಗಳೂರು (ಮಾ. 25): ಸ್ವಾಮೀಜಿಗಳು (Swamiji) ತಲೆಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರಿತಿ ಮುಸ್ಲಿಂ ಹೆಣ್ಣುಮಕ್ಕಳಿಗೂ ಅವಕಾಶ ನೀಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Former CM Siddaramaiah ) ವಿರುದ್ಧ ಆಡಳಿತ ಪಕ್ಷ ಬಿಜೆಪಿಯ (BJP) ನಾಯಕರು ತಿರುಗಿಬಿದ್ದಿದ್ದಾರೆ. ಸಿದ್ಧರಾಮಯ್ಯ ಈ ವಿಚಾರದಲ್ಲಿ ಸ್ವಾಮೀಜಿಗಳ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh), ಸ್ವಾಮೀಜಿಗಳುತಲೆಗೆ ಬಟ್ಟೆ ಹಾಕ್ತಾರೆ, ಅದಕ್ಕೆ ಮುಸ್ಲಿಂ ಹುಡುಗಿಯರಿಗೂ ಅದೇ ರೀತಿ ಅವಕಾಶ ನೀಡಿ ಅಂತಾ ಹೇಳ್ತಿದ್ದಾರೆ. ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಟೋಪಿ ಹಾಕ್ತಾರೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಉದ್ದುದ್ದ ಗಡ್ಡ ಬಿಟ್ಟುಕೊಂಡು ಬರಲು ಅನುಮತಿ ಕೊಡೋಕೆ ಸಾಧ್ಯವಾಗುತ್ತಾ? ಬಹುಶಃ ಅವರು ಹಾಗೇ ಹೇಳಿಲ್ಲ ಅನ್ನೋದೆ ನಮ್ಮ ಪುಣ್ಯ. ಚುನಾವಣೆ ಆದ ನಂತರ ಸಿದ್ಧರಾಮಯ್ಯ ಹತಾಶರಾಗಬಹುದು ಎಂದು ಅಂದುಕೊಂಡಿದ್ದೆ. ಆದರೆ, ಅವರ ಈ ಮಾತುಗಳನ್ನು ಕೇಳಿದರೆ, ಈಗಲೇ ಹತಾಶರಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

ಹಿಜಾಬ್ ನಂಥ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆದು ತಂದಿರುವುದೇ ತಪ್ಪು. ಸಿದ್ಧರಾಮಯ್ಯ ಅವರಂಥ ಹಿರಿಯ ರಾಜಕಾರಣಿ ಆಡುವ ಮಾತುಗಳಲ್ಲ. ಅವರು ಸ್ವಾಮೀಜಿಗಳ ಕ್ಷಮೆ ಕೇಳಬೇಕು. ಇಂಥದ್ದೊಂದು ಮಾತುಗಳನ್ನು ಹೇಳುವ ಮೂಲಕ ಅಗತ್ಯವಿಲ್ಲ ವೋಟ್ ಬ್ಯಾಂಕ್ ರಾಜಕಾರಣವನ್ನು ಮಾಡುವುದನ್ನು ಅವರು ಬಿಡಬೇಕು ಎಂದು ಬಿಸಿ ನಾಗೇಶ್ ಹೇಳಿದ್ದಾರೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more