Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Published : Mar 25, 2022, 04:43 PM IST

ಸಿದ್ಧರಾಮಯ್ಯ ಅವರಿಂದ ವೋಟ್ ಬ್ಯಾಂಕ್ ರಾಜಕಾರಣ

ಹಿಜಾಬ್ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆ ತಂದಿರುವುದು ತಪ್ಪು

ಸ್ವಾಮೀಜಿಗಳ ವೇಷಭೂಷಣವನ್ನು ಹೋಲಿಸಿ ಮಾತನಾಡಿದ್ದ ಸಿದ್ಧರಾಮಯ್ಯ

ಬೆಂಗಳೂರು (ಮಾ. 25): ಸ್ವಾಮೀಜಿಗಳು (Swamiji) ತಲೆಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರಿತಿ ಮುಸ್ಲಿಂ ಹೆಣ್ಣುಮಕ್ಕಳಿಗೂ ಅವಕಾಶ ನೀಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Former CM Siddaramaiah ) ವಿರುದ್ಧ ಆಡಳಿತ ಪಕ್ಷ ಬಿಜೆಪಿಯ (BJP) ನಾಯಕರು ತಿರುಗಿಬಿದ್ದಿದ್ದಾರೆ. ಸಿದ್ಧರಾಮಯ್ಯ ಈ ವಿಚಾರದಲ್ಲಿ ಸ್ವಾಮೀಜಿಗಳ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh), ಸ್ವಾಮೀಜಿಗಳುತಲೆಗೆ ಬಟ್ಟೆ ಹಾಕ್ತಾರೆ, ಅದಕ್ಕೆ ಮುಸ್ಲಿಂ ಹುಡುಗಿಯರಿಗೂ ಅದೇ ರೀತಿ ಅವಕಾಶ ನೀಡಿ ಅಂತಾ ಹೇಳ್ತಿದ್ದಾರೆ. ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಟೋಪಿ ಹಾಕ್ತಾರೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಉದ್ದುದ್ದ ಗಡ್ಡ ಬಿಟ್ಟುಕೊಂಡು ಬರಲು ಅನುಮತಿ ಕೊಡೋಕೆ ಸಾಧ್ಯವಾಗುತ್ತಾ? ಬಹುಶಃ ಅವರು ಹಾಗೇ ಹೇಳಿಲ್ಲ ಅನ್ನೋದೆ ನಮ್ಮ ಪುಣ್ಯ. ಚುನಾವಣೆ ಆದ ನಂತರ ಸಿದ್ಧರಾಮಯ್ಯ ಹತಾಶರಾಗಬಹುದು ಎಂದು ಅಂದುಕೊಂಡಿದ್ದೆ. ಆದರೆ, ಅವರ ಈ ಮಾತುಗಳನ್ನು ಕೇಳಿದರೆ, ಈಗಲೇ ಹತಾಶರಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

ಹಿಜಾಬ್ ನಂಥ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆದು ತಂದಿರುವುದೇ ತಪ್ಪು. ಸಿದ್ಧರಾಮಯ್ಯ ಅವರಂಥ ಹಿರಿಯ ರಾಜಕಾರಣಿ ಆಡುವ ಮಾತುಗಳಲ್ಲ. ಅವರು ಸ್ವಾಮೀಜಿಗಳ ಕ್ಷಮೆ ಕೇಳಬೇಕು. ಇಂಥದ್ದೊಂದು ಮಾತುಗಳನ್ನು ಹೇಳುವ ಮೂಲಕ ಅಗತ್ಯವಿಲ್ಲ ವೋಟ್ ಬ್ಯಾಂಕ್ ರಾಜಕಾರಣವನ್ನು ಮಾಡುವುದನ್ನು ಅವರು ಬಿಡಬೇಕು ಎಂದು ಬಿಸಿ ನಾಗೇಶ್ ಹೇಳಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more