Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Hijab Row ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಹಾಗಂತ ವಿದ್ಯಾರ್ಥಿಗಳಿಗೆ ಅದನ್ನೇ ಹೇಳೋಕೆ ಆಗುತ್ತಾ?

Published : Mar 25, 2022, 04:43 PM IST

ಸಿದ್ಧರಾಮಯ್ಯ ಅವರಿಂದ ವೋಟ್ ಬ್ಯಾಂಕ್ ರಾಜಕಾರಣ

ಹಿಜಾಬ್ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆ ತಂದಿರುವುದು ತಪ್ಪು

ಸ್ವಾಮೀಜಿಗಳ ವೇಷಭೂಷಣವನ್ನು ಹೋಲಿಸಿ ಮಾತನಾಡಿದ್ದ ಸಿದ್ಧರಾಮಯ್ಯ

ಬೆಂಗಳೂರು (ಮಾ. 25): ಸ್ವಾಮೀಜಿಗಳು (Swamiji) ತಲೆಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರಿತಿ ಮುಸ್ಲಿಂ ಹೆಣ್ಣುಮಕ್ಕಳಿಗೂ ಅವಕಾಶ ನೀಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ (Former CM Siddaramaiah ) ವಿರುದ್ಧ ಆಡಳಿತ ಪಕ್ಷ ಬಿಜೆಪಿಯ (BJP) ನಾಯಕರು ತಿರುಗಿಬಿದ್ದಿದ್ದಾರೆ. ಸಿದ್ಧರಾಮಯ್ಯ ಈ ವಿಚಾರದಲ್ಲಿ ಸ್ವಾಮೀಜಿಗಳ ಕ್ಷಮೆ ಕೇಳಲೇಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿಸಿ ನಾಗೇಶ್ (BC Nagesh), ಸ್ವಾಮೀಜಿಗಳುತಲೆಗೆ ಬಟ್ಟೆ ಹಾಕ್ತಾರೆ, ಅದಕ್ಕೆ ಮುಸ್ಲಿಂ ಹುಡುಗಿಯರಿಗೂ ಅದೇ ರೀತಿ ಅವಕಾಶ ನೀಡಿ ಅಂತಾ ಹೇಳ್ತಿದ್ದಾರೆ. ಮುಸ್ಲಿಂ ಧರ್ಮಗುರುಗಳು ಗಡ್ಡ ಬಿಡ್ತಾರೆ, ಟೋಪಿ ಹಾಕ್ತಾರೆ. ಅದೇ ರೀತಿ ವಿದ್ಯಾರ್ಥಿಗಳಿಗೆ ಉದ್ದುದ್ದ ಗಡ್ಡ ಬಿಟ್ಟುಕೊಂಡು ಬರಲು ಅನುಮತಿ ಕೊಡೋಕೆ ಸಾಧ್ಯವಾಗುತ್ತಾ? ಬಹುಶಃ ಅವರು ಹಾಗೇ ಹೇಳಿಲ್ಲ ಅನ್ನೋದೆ ನಮ್ಮ ಪುಣ್ಯ. ಚುನಾವಣೆ ಆದ ನಂತರ ಸಿದ್ಧರಾಮಯ್ಯ ಹತಾಶರಾಗಬಹುದು ಎಂದು ಅಂದುಕೊಂಡಿದ್ದೆ. ಆದರೆ, ಅವರ ಈ ಮಾತುಗಳನ್ನು ಕೇಳಿದರೆ, ಈಗಲೇ ಹತಾಶರಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.

ಹಿಂದೂ ಹೆಣ್ಮಕ್ಕಳು, ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕ್ತಾರೆ, ಮುಸ್ಲಿಂ ಹುಡ್ಗೀರು ಹಾಕಿದ್ರೆ ತಪ್ಪೇನು?

ಹಿಜಾಬ್ ನಂಥ ವಿಚಾರದಲ್ಲಿ ಸ್ವಾಮೀಜಿಗಳನ್ನು ಎಳೆದು ತಂದಿರುವುದೇ ತಪ್ಪು. ಸಿದ್ಧರಾಮಯ್ಯ ಅವರಂಥ ಹಿರಿಯ ರಾಜಕಾರಣಿ ಆಡುವ ಮಾತುಗಳಲ್ಲ. ಅವರು ಸ್ವಾಮೀಜಿಗಳ ಕ್ಷಮೆ ಕೇಳಬೇಕು. ಇಂಥದ್ದೊಂದು ಮಾತುಗಳನ್ನು ಹೇಳುವ ಮೂಲಕ ಅಗತ್ಯವಿಲ್ಲ ವೋಟ್ ಬ್ಯಾಂಕ್ ರಾಜಕಾರಣವನ್ನು ಮಾಡುವುದನ್ನು ಅವರು ಬಿಡಬೇಕು ಎಂದು ಬಿಸಿ ನಾಗೇಶ್ ಹೇಳಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more