ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?

ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?

Published : May 21, 2024, 08:08 AM ISTUpdated : May 21, 2024, 08:09 AM IST

ಸರ್ಕಾರದ 1 ವರ್ಷದ ಸಾಧನೆಗೆ ವಿರೋಧ ಪಕ್ಷ ಹೇಳಿದ್ದೇನು..? 
1 ವರ್ಷದ ಸರ್ಕಾರದ ಮುಂದಿರುವ ಸವಾಲುಗಳು ಯಾವವು..? 
ಗ್ಯಾರಂಟಿಗಳನ್ನು ನಿಭಾಯಿಸಿದ್ದು ಹೇಗೆಂದು ಲೆಕ್ಕ ಕೊಟ್ಟ ಸಿದ್ದು

ಕಾಂಗ್ರೆಸ್ ಆಡಳಿತ ರಾಜ್ಯ ಸರ್ಕಾರಕ್ಕೆ ಈಗ ಒಂದು ವರ್ಷ. ಸಿದ್ದು ನೇತೃತ್ವದ ಸರ್ಕಾರ(Congress government) ನಿನ್ನೆಗೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ. ಸಿಎಂ ಸಿದ್ದರಾಮಯ್ಯ(Siddaramaiah) ತಮ್ಮ ಸರ್ಕಾರದ ಒಂದು ವರ್ಷದ ಸಾಧನೆ ಪಟ್ಟಿನ್ನು ಏಳು ಕೋಟಿ ಕನ್ನಡಿಗರ ಮುಂದಿಟ್ಟಿದ್ದಾರೆ. ಅಸಾಧ್ಯವಾದದ್ದನ್ನು ನಾವು ಸಾಧಿಸಿದ್ದೇವೆಂದು ಡಿಸಿಎಂ ಡಿಕೆ ಶಿವಕುಮಾರ್(DK Shivakumar)ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಕಾಂಗ್ರೆಸ್‌ನ(Congress) ಈ ಸಾಧನಾ ಪಟ್ಟಿಗೆ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಮೇ 20 2023ರಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿತ್ತು. ಅಂದು ಅಧಿಕಾರ ಗದ್ದುಗೆ ಏರಿದ್ದ ಸಿದ್ದು ನೇತೃತ್ವದ ಸರ್ಕಾರಕ್ಕೆ ಈಗ ಒಂದು ವರ್ಷವಾಗಿದೆ. ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಒಂದು ವರ್ಷ ಯಶಸ್ವಿಯಾಗಿ ಸಾಗುವುದಕ್ಕೆ ಪ್ರಮುಖವಾಗಿ ರಾಜ್ಯದ ಜನತೆ ಕಾರಣ ಹೀಗಾಗಿ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳನ್ನು ಸಿಎಂ ಸಿದ್ದು ತಿಳಿಸಿದ್ದಾರೆ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದೆ. ಸರ್ಕಾರ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ಕುರಿತು ಸಿಎಂ ಸಿದ್ದರಾಮಯ್ಯನವರಿಗೆ ತುಂಬಾ ಹೆಮ್ಮೆಯಿಂದೆ. ಒಂದು ವರ್ಷದ ಸಾಧನೆಯನ್ನು ದೊಡ್ಡ ಸಂಭ್ರಮದೊಂದಿಗೆ ಆಚರಿಸಬೇಕೆಂಬ ಆಸೆ ಸಿಎಂಗೆ ಇತ್ತಂತೆ. ಆದ್ರೆ, ಲೋಕಸಭಾ ಚುನಾವಣೆ ಸಂದರ್ಭ ಇದಾಗಿರೋದ್ರಿಂದ ನೀತಿ ಸಂಹಿತೆ ಇದಕ್ಕೆ ಅಡ್ಡಿಯಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ನರಸಿಂಹ ಜಯಂತಿ ಇದ್ದು, ಇದರ ವಿಶೇಷತೆ ಏನು, ಆಚರಿಸುವುದು ಹೇಗೆ?

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more