ಪ್ರಧಾನಿ ಮೋದಿ, ಯಡಿಯೂರಪ್ಪ ಕುರಿತಾಗಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತು!

ಪ್ರಧಾನಿ ಮೋದಿ, ಯಡಿಯೂರಪ್ಪ ಕುರಿತಾಗಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತು!

Published : Mar 04, 2023, 12:57 PM IST

ಬಿಜೆಪಿ ಸರ್ಕಾರದ ಭ್ರಷ್ಟಚಾರದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಡೆಸಿದ ಬೃಹತ್‌ ಪ್ರತಿಭಟನೆಯ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿವಾದಾತ್ಮಕ ಮಾತುಗಳನ್ನು ಹೇಳಿದ್ದಾರೆ. ಯಡಿಯೂರಪ್ಪ, ಕೇಂದ್ರ ಬಿಜೆಪಿಗೆ ಬೇಕಾದಷ್ಟು ಹಣ ನೀಡದ ಕಾರಣಕ್ಕಾಗಿಯೇ ಅವರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಲಾಯಿತು ಎಂದು ಆರೋಪಿಸಿದ್ದಾರೆ.
 

ಬೆಂಗಳೂರು (ಮಾ.4): ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್‌ ಯಡಿಯೂರಪ್ಪ ವಿರುದ್ಧ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ. ಕೇಂದ್ರ ಬಿಜೆಪಿಗೆ ಕರ್ನಾಟಕದಿಂದ ಬರಬೇಕಾದಷ್ಟು ಹಣ ನೀಡಲು ಬಿಎಸ್‌ವೈ ವಿಫಲರಾಗಿದ್ದ ಕಾರಣಕ್ಕಾಗಿಯೇ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಲಾಯಿತು ಎಂದು ಆರೋಪಿಸಿದ್ದಾರೆ.

ಕುರ್ಚಿಗೆ ಅಂಟ್ಕೊಂಡು ಕುಳಿತಿರುವ ಬಿಜೆಪಿಯನ್ನು ಒದ್ದೋಡಿಸಬೇಕು: ಸಿದ್ಧರಾಮಯ್ಯ ವಾಗ್ದಾಳಿ

ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಲಾಯಿತು. ಆದರೆ, ಬಿಎಸ್‌ವೈ ಮಾತ್ರ ತಾವೇ ರಾಜೀನಾಮೆ ನೀಡಿದ್ದು ಎನ್ನುತ್ತಾರೆ. ಹಾಗಿದ್ದರೆ, ಅವರು ಕಣ್ಣೀರು ಹಾಕಿದ್ದೇಕೆ ಎಂದು ಸಿದ್ಧರಾಮಯ್ಯ ಪ್ರಶ್ನೆ ಮಾಡಿದ್ದಾರೆ.  ಬಿಎಸ್‌ವೈ ಅವರನ್ನು ಕಿತ್ತುಹಾಕಿದ ಬಳಿಕ ಆರೆಸ್ಸೆಸ್‌ನ ಮಾತು ಕೇಳುವ ಗೊಂಬೆ ಬಸವರಾಜ್‌ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ನೇಮಿಸಲಾಗಿದೆ ಎಂದು ಆರೋಪಿಸಿದ್ದಾರೆ.


 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more