ಸಿದ್ದರಾಮಯ್ಯ ಕ್ಷೇತ್ರ ಯಾವುದಯ್ಯಾ? ಇನ್ನೂ ನಿಂತಿಲ್ವಾ ಸಿದ್ದು ಕ್ಷೇತ್ರಾನ್ವೇಷಣೆ?

ಸಿದ್ದರಾಮಯ್ಯ ಕ್ಷೇತ್ರ ಯಾವುದಯ್ಯಾ? ಇನ್ನೂ ನಿಂತಿಲ್ವಾ ಸಿದ್ದು ಕ್ಷೇತ್ರಾನ್ವೇಷಣೆ?

Published : Jan 27, 2023, 05:47 PM IST

ಯಾವ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಬೇಕು ಎನ್ನುವುದು ಸಿದ್ಧರಾಮಯ್ಯಗೆ ಇನ್ನೂ ಗೊಂದಲದಲ್ಲಿರುವಂತೆ ಕಾಣುತ್ತಿದೆ. ಕೋಲಾರದಲ್ಲಿ ಚುನಾವಣೆಗೆ ನಿಲ್ಲೋದು ಫಿಕ್ಸ್‌ ಎಂದು ಸಿದ್ಧರಾಮಯ್ಯ ಹೇಳುತ್ತಿದ್ದರೆ, ಇನ್ನೊಂದೆಡೆ ಅವರ ಪುತ್ರ ಯತೀಂದ್ರ ಸಿದ್ಧರಾಮಯ್ಯ ಬೇರೆಯದೇ ಹೇಳಿಕೆ ನೀಡುತ್ತಿದ್ದಾರೆ.
 

ಬೆಂಗಳೂರು (ಜ.27): ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆಂದು ಈಗಾಗಲೇ  ರಾಜ್ಯಕಾರಣದಲ್ಲಿ ಸಂಚಲನ ಶುರುವಾಗಿದೆ. ಆದರೆ, ವಿಪಕ್ಷ ನಾಯಕ ನಿರ್ಧಾರ ಬದಲಿಸ್ತಾರಾ ಎನ್ನುವ ಅನುಮಾನ ಕಾಡಿದೆ. ಇದರ ನಡುವೆ ಸಿದ್ಧರಾಮಯ್ಯ ಅವರ ಕ್ಷೇತ್ರಾನ್ವೇಷಣೆ ಇನ್ನೂ ನಿಂತಿಲ್ವಾ ಎನ್ನುವ ಅನುಮಾನವೂ ಶುರುವಾಗಿದೆ.

ಅದಕ್ಕೆ ಕಾರಣವಾಗಿರುವುದು ಯತೀಂದ್ರ ಸಿದ್ಧರಾಮಯ್ಯ ಅವರ ಹೇಳಿಕೆ. 'ಈಗಲೂ ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಒಪನ್ ಅವಕಾಶವಿದೆ. ಇದು ಅವರ ಕೊನೆಯ ಚುನಾವಣೆ. ಹೀಗಾಗಿ ಯಾವ ಕ್ಷೇತ್ರದಲ್ಲಿ ನಿಲ್ಲಬೇಕೆಂಬ ಗೊಂದಲವಿದೆ' ಎಂದು ಅವರು ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಹಾಲಿ, ಮಾಜಿ ಸಿಎಂಗಳ ಭ್ರಷ್ಟಾಚಾರ ಬಡಿದಾಟ!

ಇದರ ಬೆನ್ನಲ್ಲಿಯೇ ಸಿದ್ಧರಾಮಯ್ಯ ಅವರ ಕ್ಷೇತ್ರ ಕೋಲಾರವೋ, ವರುಣವೋ ಎನ್ನುವ ಚರ್ಚೆ ಮತ್ತೆ ಶುರುವಾಗಿದೆ. ಸಿದ್ದರಾಮಯ್ಯನವರು ಈ ರಾಜ್ಯ ಕಂಡ ಅಪರೂಪದ ಜನಪರ ರಾಜಕಾರಣಿ. ಅವರದ್ದು ಇದು ಕೊನೆಯ ಚುನಾವಣೆ, ಸಿದ್ದರಾಮಯ್ಯ ಅವರಿಗೆ ಕ್ಷೇತ್ರವಿಲ್ಲ ಎಂಬ ಪ್ರಚಾರ ಪ್ರತಿಪಕ್ಷದ ತಂತ್ರವಾಗಿದೆ. ಸಿದ್ದರಾಮಯ್ಯ ನವರಿಗೆ ಬೇರೆ ಬೇರೆ ಕ್ಷೇತ್ರದಿಂದ ನಿಲ್ಲಿ ಎಂದು ಆಹ್ವಾನ ಬರುತ್ತಿದೆ. ಅವರದು ಈಗಲೇ ಕ್ಷೇತ್ರದ ಬಗ್ಗೆ ಫೈನಲ್ ಮಾಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more