ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

ಶಿರಬಾಗಿ ನಮಸ್ಕರಿಸಿ ಬಸ್‌ ಹತ್ತಿದ ಅಜ್ಜಿ: ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಎಂದ ಸಿಎಂ

Published : Jun 12, 2023, 11:03 AM IST

ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿರುವ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.
 

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಬಸ್‌ ಹತ್ತುವಾಗ ಧಾರವಾಡದಲ್ಲಿ ಅಜ್ಜಿಯೊಬ್ಬರು ಬಸ್‌ಗೆ ಶಿರಬಾಗಿ ನಮಸ್ಕರಿಸಿದ್ದಾರೆ. ಈ ಫೋಟೋವನ್ನು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ. ಟ್ವೀಟ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ. ನಾವು ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಘೋಷಿಸಿದಾಗ ಶ್ರಮಪಡದೆ ಸಮಾಜದ ಎಲ್ಲಾ ವಿಧದ ಸೌಲಭ್ಯಗಳನ್ನು ಕೂತಲ್ಲಿಯೇ ಅನುಭವಿಸುತ್ತಿರುವ ಜನರಿಂದ ತರತರನಾದ ಟೀಕೆಗಳು, ಕುಹಕ, ವ್ಯಂಗ್ಯಗಳು ವ್ಯಕ್ತವಾದವು. ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಶಕ್ತಿ ಯೋಜನೆಯನ್ನು ಜಾರಿಗೆ ಕೊಟ್ಟೆವು. ನಮ್ಮ ಯೋಜನೆ ಜಾರಿಗೊಂಡ ನಂತರ ತಾಯಿಯೊಬ್ಬರು ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್‌ಗೆ ನಮಸ್ಕರಿಸಿ ಅತ್ಯಂತ ಸಂತೋಷದಿಂದ ಉಚಿತ ಪ್ರಯಾಣ ಮಾಡಿದರು. ನಾವು ಎಷ್ಟು ಅನುದಾನ ಖರ್ಚು ಮಾಡುತ್ತೇವೆ ಎನ್ನುವುದಕ್ಕಿಂತ ಯಾರಿಗಾಗಿ ಆ ಹಣ ವಿನಿಯೋಗಿಸುತ್ತಿದ್ದೇವೆ ಎಂಬುದು ಮುಖ್ಯ. ಈ ಕ್ಷಣ ಇನ್ನೂ ನೂರು ವಿಧದಲ್ಲಿ ಟೀಕೆಗಳು ಎದುರಾದರೂ ಅದ್ಯಾವುದಕ್ಕೂ ಕುಗ್ಗದಂತೆ ನನ್ನನ್ನು ಗುರಿಯೆಡೆಗೆ ಮತ್ತಷ್ಟು ದೃಢವಾಗಿಸಿದೆ. ಯೋಜನೆ ಜಾರಿಗೆ ಕೊಟ್ಟ ಸಂತೃಪ್ತಿ ನನಗೆ ನೀಡಿದ ಜೊತೆಗೆ ಬಹುಕಾಲ ನೆನಪಿನಲ್ಲಿ ಉಳಿಯುವಂತ ಫೋಟೋ ಇದು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಬೈಕ್‌ ಸವಾರನ ಮೇಲೆ ದಾಳಿಗೆ ಮುಂದಾದ ಕರಡಿ: ಸ್ವಲ್ಪದರಲ್ಲೇ ಬಚಾವ್‌... ಅಬ್ಬಾ..! ಭಯಾನಕ ವಿಡಿಯೋ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more