ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!

ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!

Published : Nov 28, 2025, 03:03 PM IST
ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಾಯಕತ್ವ ಸಂಘರ್ಷ ತಾರಕಕ್ಕೇರಿದೆ. ಅಧಿಕಾರ ಹಂಚಿಕೆಯ 'ಕೊಟ್ಟ ಮಾತನ್ನು' ಡಿ.ಕೆ. ಶಿವಕುಮಾರ್ ಬಣ ನೆನಪಿಸುತ್ತಿದ್ದು, ಈ ಮಾತಿನ ಸಮರದ ಅಂತಿಮ ನಿರ್ಧಾರಕ್ಕಾಗಿ ಎಲ್ಲರ ಕಣ್ಣು ದೆಹಲಿಯ ಹೈಕಮಾಂಡ್‌ನತ್ತ ನೆಟ್ಟಿದೆ.

ಬೆಂಗಳೂರು (ನ.28): ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿದ್ದು, ಇದೀಗ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಾಯಕತ್ವ ಸಂಘರ್ಷ ತಾರಕಕ್ಕೇರಿದೆ. ಈ ಕಾದಾಟದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ (ಡಿಕೆಶಿ) ಬಣವು 'ಕೊಟ್ಟ ಮಾತು ಉಳಿಸಿಕೊಳ್ಳುವುದು ಜಗತ್ತಿನ ದೊಡ್ಡ ಶಕ್ತಿ' ಎಂಬ ಅಸ್ತ್ರವನ್ನು ಪ್ರಯೋಗಿಸುತ್ತಿದೆ.

ಡಿಕೆ ಶಿವಕುಮಾರ್ ಮತ್ತು ಸಹೋದರ ಡಿ.ಕೆ. ಸುರೇಶ್ ಅವರು ಪದೇ ಪದೇ 'ಕೊಟ್ಟ ಮಾತನ್ನು' ನೆನಪಿಸುತ್ತಿದ್ದಾರೆ. ಇದು, ಅಧಿಕಾರ ಹಂಚಿಕೆ ಕುರಿತು ಈ ಹಿಂದೆ ಹೈಕಮಾಂಡ್‌ನೊಂದಿಗೆ ನಡೆದ ಮಾತುಕತೆಯ ಸುಳಿವು ಎಂದು ವಿಶ್ಲೇಷಿಸಲಾಗುತ್ತಿದೆ. ಡಿಕೆಶಿ "ವರ್ಡ್ ಪವರ್ ಇಸ್ ವರ್ಲ್ಡ್ ಪವರ್" ಎಂದು ಘೋಷಿಸುವ ಮೂಲಕ, ತಾವು ಮತ್ತು ತಮ್ಮ ಬೆಂಬಲಿಗರು 'ಮಾತು' ಎಂಬ ಒಂದೇ ಅಸ್ತ್ರದ ಮೂಲಕ ಒತ್ತಡ ಹೇರುತ್ತಿದ್ದಾರೆ.

ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!

ಡಿಕೆಶಿ ಅವರ ಪೋಸ್ಟ್‌ಗಳಿಗೆ ಪ್ರತಿಕ್ರಿಯೆಯಾಗಿ ಸಿಎಂ ಸಿದ್ದರಾಮಯ್ಯ ಸಹ ತಮ್ಮ ಮಾತಿನ ಶಕ್ತಿಯನ್ನು ಪ್ರದರ್ಶಿಸಿದ್ದಾರೆ. "ನಮ್ಮ ಮಾತು ಕೇವಲ ಘೋಷಣೆಯಲ್ಲ.. ಅದೇ ನಮ್ಮ ಜಗತ್ತು," ಎಂದು ಪೋಸ್ಟ್ ಮಾಡುವ ಮೂಲಕ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ತಮ್ಮ ಸರ್ಕಾರದ ಬದ್ಧತೆಯನ್ನು ಎತ್ತಿ ಹಿಡಿದಿದ್ದಾರೆ. 'ಮಾತಿನ ಸಮರ' ತೀವ್ರಗೊಂಡಿರುವ ಬೆನ್ನಲ್ಲೇ, ನಾಯಕತ್ವ ಸಂಘರ್ಷದಲ್ಲಿ ಎರಡೂ ಬಣಗಳ ಪರವಾಗಿ ಸೋಲು-ಗೆಲುವನ್ನು ನಿರ್ಧರಿಸುವ 'ಧರ್ಮಾಸ್ತ್ರ'ಗಳ (ಜಾತಿ/ಸಮುದಾಯ ಆಧರಿತ ಬೆಂಬಲ) ಪ್ರಯೋಗವೂ ಶುರುವಾಗಿದೆ. ಈ ಆಂತರಿಕ ಯುದ್ಧದ ಅಂತಿಮ ನಿರ್ಧಾರಕ್ಕಾಗಿ ಎಲ್ಲರ ಕಣ್ಣು ಈಗ ದೆಹಲಿಯತ್ತ ನೆಟ್ಟಿದೆ.

 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more