ಹೈಕಮಾಂಡ್‌ ಮಟ್ಟದಲ್ಲಿ ನಡೆಯಿತು ರಹಸ್ಯ ಒಪ್ಪಂದ, ಅಧಿಕಾರ ಹಂಚಿಕೆಗೆ ಒಪ್ಪಿದ ನಾಯಕರು!

ಹೈಕಮಾಂಡ್‌ ಮಟ್ಟದಲ್ಲಿ ನಡೆಯಿತು ರಹಸ್ಯ ಒಪ್ಪಂದ, ಅಧಿಕಾರ ಹಂಚಿಕೆಗೆ ಒಪ್ಪಿದ ನಾಯಕರು!

Published : May 18, 2023, 11:40 PM IST

ಕೊನೆಗೂ ಕರ್ನಾಟಕ ಸಿಎಂ ಪ್ರಹಸನಕ್ಕೆ ದೆಹಲಿಯಲ್ಲಿ ತೆರೆ ಬಿದ್ದಿದೆ. ಸಿದ್ಧರಾಮಯ್ಯ ಅವರನ್ನು ಸಿಎಂ ಆಗಿ, ಡಿಕೆ ಶಿವಕುಮಾರ್‌ ಅವರನ್ನು ಡಿಸಿಎಂ ಆಗಿ ಕಾಂಗ್ರೆಸ್‌ ಹೈಕಮಾಂಡ್‌ ಘೋಷಣೆ ಮಾಡಿದೆ.
 

ಬೆಂಗಳೂರು (ಮೇ.18): ಐದು ದಿನಗಳ ಸಿಎಂ ಆಯ್ಕೆ ಪ್ರಹಸನಕ್ಕೆ ದೆಹಲಿಯಲ್ಲಿ ತೆರೆಬಿದ್ದಿದೆ. ಸಿದ್ಧರಾಮಯ್ಯ ಅವರು ಸಿಎಂ ಆಗಿ ಆಯ್ಕೆಯಾಗಿದ್ದರೆ, ಡಿಕೆಶಿ ಡಿಸಿಎಂ ಆಗಿ ನಿಯೋಜಿತರಾಗಿದ್ದಾರೆ. ಅಧಿಕಾರ ಹಂಚಿಕೆಯ ಸೂತ್ರಕ್ಕೆ ಉಭಯ ನಾಯಕರು ಒಪ್ಪಿದ್ದಾರೆ.

ದೆಹಲಿಯಲ್ಲಿ ಸತತ ಐದು ದಿನಗಳ ಕಾಲ ನಡೆದ ಚರ್ಚೆಯಲ್ಲಿ ಯಾರಿಗೆ ಏನೆಲ್ಲಾ ಅಧಿಕಾರ ಸಿಕ್ಕಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಮೊದಲ ಎರಡು ವರ್ಷ ಸಿದ್ಧರಾಮಯ್ಯಗೆ ಪಟ್ಟ ಸಿಕ್ಕಿದ್ದರೆ, ನಂತರದ ಮೂರು ವರ್ಷ ಡಿಕೆಶಿ ಸಿಎಂ ಆಗಲಿದ್ದಾರೆ ಎಂದು ವರದಿಯಾಗಿದೆ. ಇನ್ನು ಡಿಕೆ ಶಿವಕುಮಾರ್‌ ಹಾಗೂ ಸಿದ್ಧರಾಮಯ್ಯ ನಡುವೆ ಅಧಿಕಾರ ಹಂಚಿಕೆ ರಹಸ್ಯವಾಗಿ ನಡೆದಿದೆ. ಇದರ ಬಗ್ಗೆ ಇಬ್ಬರೂ ಸಣ್ಣ ಮಾಹಿತಿಯನ್ನೂ ಬಿಟ್ಟುಕೊಟ್ಟಿಲ್ಲ. ಡಿಸಿಎಂ ಜೊತೆಗೆ ಇಂಧನ ಹಾಗೂ ನೀರಾವರಿ ಇಲಾಖೆಯನ್ನು ಡಿಕೆಶಿ ವಹಿಸಿಕೊಳ್ಳುವ ಸಾಧ್ಯತೆ ಇದೆ.

ಸರ್ಕಾರ ರಚನೆಗೆ ಸಿದ್ದರಾಮಯ್ಯಗೆ ಗ್ರೀನ್‌ ಸಿಗ್ನಲ್‌ ನೀಡಿದ ರಾಜ್ಯಪಾಲರು: ನಾಳಿದ್ದು ಪ್ರಮಾಣವಚನ

ದೆಹಲಿಯಿಂದ ಬಂದ ಬೆನ್ನಲ್ಲಿಯೇ ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿ ಕಾಂಗ್ರೆಸ್‌ನ ಶಾಸಕಾಂಗ ಸಭೆ ನಡೆಯಿತು. ಇದರಲ್ಲಿ ಸಿದ್ಧರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ಧರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಅದರ ಬೆನ್ನಲ್ಲಿಯೇ ರಾಜಭವನಕ್ಕೆ ನಾಯಕರು ಭೇಟಿ ನೀಡಿ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more