ಯಾರೇ ಪ್ರಯತ್ನಿಸಿದ್ದರೂ ರಾಜಕೀಯ ವಿರೋಧಿಗಳ ಬಗ್ಗೆ ಒಂದೇ ಒಂದು ಕೆಟ್ಟ ಮಾತಾಡದ ಎಸ್‌.ಎಂ ಕೃಷ್ಣ

ಯಾರೇ ಪ್ರಯತ್ನಿಸಿದ್ದರೂ ರಾಜಕೀಯ ವಿರೋಧಿಗಳ ಬಗ್ಗೆ ಒಂದೇ ಒಂದು ಕೆಟ್ಟ ಮಾತಾಡದ ಎಸ್‌.ಎಂ ಕೃಷ್ಣ

Published : Dec 11, 2024, 11:57 PM ISTUpdated : Dec 12, 2024, 12:02 AM IST

ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.  ವರ್ಣರಂಜಿತ ರಾಜಕಾರಣಿಯ ಬದುಕಿನ ಹಲವು ಮಜಲುಗಳು ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಬಗ್ಗೆ ವಿವರವಾದ ಮಾಹಿತಿ ನ್ಯೂಸ್ ಅವರ್‌ನಲ್ಲಿ ಇದೆ ವೀಕ್ಷಿಸಿ. 

ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆಯಿತು. ಪ್ರಯತ್ನಿಸಿದ್ದರೂ ಕೂಡ ಕೃಷ್ಣ ಅವರ ಬಾಯಿಯಿಂದ ಅವರ ರಾಜಕೀಯ ವಿರೋಧಿಗಳ ಬಗ್ಗೆ ಒಂದು ಕೆಟ್ಟ ಶಬ್ಧವನ್ನು ಹುಟ್ಟಿಸಲು ಸಾಧ್ಯವಾಗುತ್ತಿರಲಿಲ್ಲ, ಏನು ತಿಪ್ಪರಲಾಗ ಹಾಕಿದರು ಕೃಷ್ಣ ಅವರು ಸಿಟ್ಟು ಮಾಡಿಕೊಂಡು ಕೂಗಾಡುವ ಒಂದೇ ಒಂದು ವೀಡಿಯೋ ಸಿಗುತ್ತಿರಲಿಲ್ಲ, ಇಂತಹ ಮಹಾನ್‌ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ತೊರೆದು ಭಾಗಿಯಾಗಿದ್ದರು. 

ವಯನಾಡ್‌ನಲ್ಲಿ ಜುಲೈ 30ನೇ ತಾರೀಕು ಭೂಕುಸಿತ ಉಂಟಾಗಿತ್ತು. ಈ ಘಟನೆಯಲ್ಲಿ 200ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದರು.  ಆಗ ಅದು ರಾಹುಲ್ ಗಾಂಧಿಯವರ ಕ್ಷೇತ್ರವಾಗಿದ್ದರೆ ಈಗ ಅದು ಪ್ರಿಯಾಂಕಾ ಗಾಂಧಿಯವರ ಕ್ಷೇತ್ರವಾಗಿದೆ. ಆ ಘಟನೆ ನಡೆದಾಗ ಸಿದ್ದರಾಮಯ್ಯ ಅಲ್ಲಿ 100 ಮನೆಗಳನ್ನು ಕಟ್ಟಿಸಿ ಕೊಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಕೇರಳ ಸರ್ಕಾರಕ್ಕೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ಆಸಕ್ತಿ ಇಲ್ಲ, ಹೀಗಿರುವಾಗ ಕರ್ನಾಟಕ ರಾಜ್ಯ ಸರ್ಕಾರ ಕೇರಳ ಸರ್ಕಾರಕ್ಕೆ ಪತ್ರ ಬರೆದಿದ್ದು, ಜಾಗ ತೋರಿಸಿಕೊಡಿ ಬೇಕಾದರೆ ಜಾಗದ ಹಣವನ್ನು ನಾವೇ ಕೊಡುತ್ತೇವೆ ಎಂದು ಹೇಳಿದೆ. ಆದರೆ ಕರ್ನಾಟಕ ಸರ್ಕಾರದ ಹಣ ಕೇರಳದ ಜನರ ಪುನರ್ವಸತಿಗೆ ಏಕೆ ಹೋಗಬೇಕು ಎಂಬುದು ಇಲ್ಲಿ ಪ್ರಶ್ನೆಯಾಗಿದ್ದು, ಹೊಸ ವಿವಾದ ಸೃಷ್ಟಿಯಾಗಿದೆ. ಊರಿಗೆ ಉಪಕಾರಿ ಮನೆಗೆ ಮಾರಿಯಂತೆ ವರ್ತಿಸುತ್ತಿದ್ದೀರಿ ಎಂದು ರಾಜ್ಯದ ವಿಪಕ್ಷ ನಾಯಕರು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಈ ವಿವರವೂ ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿಗಳ ಕಂಪ್ಲೀಟ್ ನ್ಯೂಸ್ ಪ್ಯಾಕೇಜ್ ನ್ಯೂಸ್‌ ಅವರ್‌ನಲ್ಲಿ ನೋಡಿ

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more