ಯಾರೇ ಪ್ರಯತ್ನಿಸಿದ್ದರೂ ರಾಜಕೀಯ ವಿರೋಧಿಗಳ ಬಗ್ಗೆ ಒಂದೇ ಒಂದು ಕೆಟ್ಟ ಮಾತಾಡದ ಎಸ್‌.ಎಂ ಕೃಷ್ಣ

ಯಾರೇ ಪ್ರಯತ್ನಿಸಿದ್ದರೂ ರಾಜಕೀಯ ವಿರೋಧಿಗಳ ಬಗ್ಗೆ ಒಂದೇ ಒಂದು ಕೆಟ್ಟ ಮಾತಾಡದ ಎಸ್‌.ಎಂ ಕೃಷ್ಣ

Published : Dec 11, 2024, 11:57 PM ISTUpdated : Dec 12, 2024, 12:02 AM IST

ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.  ವರ್ಣರಂಜಿತ ರಾಜಕಾರಣಿಯ ಬದುಕಿನ ಹಲವು ಮಜಲುಗಳು ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ಬಗ್ಗೆ ವಿವರವಾದ ಮಾಹಿತಿ ನ್ಯೂಸ್ ಅವರ್‌ನಲ್ಲಿ ಇದೆ ವೀಕ್ಷಿಸಿ. 

ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆಯಿತು. ಪ್ರಯತ್ನಿಸಿದ್ದರೂ ಕೂಡ ಕೃಷ್ಣ ಅವರ ಬಾಯಿಯಿಂದ ಅವರ ರಾಜಕೀಯ ವಿರೋಧಿಗಳ ಬಗ್ಗೆ ಒಂದು ಕೆಟ್ಟ ಶಬ್ಧವನ್ನು ಹುಟ್ಟಿಸಲು ಸಾಧ್ಯವಾಗುತ್ತಿರಲಿಲ್ಲ, ಏನು ತಿಪ್ಪರಲಾಗ ಹಾಕಿದರು ಕೃಷ್ಣ ಅವರು ಸಿಟ್ಟು ಮಾಡಿಕೊಂಡು ಕೂಗಾಡುವ ಒಂದೇ ಒಂದು ವೀಡಿಯೋ ಸಿಗುತ್ತಿರಲಿಲ್ಲ, ಇಂತಹ ಮಹಾನ್‌ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಪಕ್ಷಬೇಧ ತೊರೆದು ಭಾಗಿಯಾಗಿದ್ದರು. 

ವಯನಾಡ್‌ನಲ್ಲಿ ಜುಲೈ 30ನೇ ತಾರೀಕು ಭೂಕುಸಿತ ಉಂಟಾಗಿತ್ತು. ಈ ಘಟನೆಯಲ್ಲಿ 200ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದರು.  ಆಗ ಅದು ರಾಹುಲ್ ಗಾಂಧಿಯವರ ಕ್ಷೇತ್ರವಾಗಿದ್ದರೆ ಈಗ ಅದು ಪ್ರಿಯಾಂಕಾ ಗಾಂಧಿಯವರ ಕ್ಷೇತ್ರವಾಗಿದೆ. ಆ ಘಟನೆ ನಡೆದಾಗ ಸಿದ್ದರಾಮಯ್ಯ ಅಲ್ಲಿ 100 ಮನೆಗಳನ್ನು ಕಟ್ಟಿಸಿ ಕೊಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಕೇರಳ ಸರ್ಕಾರಕ್ಕೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ಆಸಕ್ತಿ ಇಲ್ಲ, ಹೀಗಿರುವಾಗ ಕರ್ನಾಟಕ ರಾಜ್ಯ ಸರ್ಕಾರ ಕೇರಳ ಸರ್ಕಾರಕ್ಕೆ ಪತ್ರ ಬರೆದಿದ್ದು, ಜಾಗ ತೋರಿಸಿಕೊಡಿ ಬೇಕಾದರೆ ಜಾಗದ ಹಣವನ್ನು ನಾವೇ ಕೊಡುತ್ತೇವೆ ಎಂದು ಹೇಳಿದೆ. ಆದರೆ ಕರ್ನಾಟಕ ಸರ್ಕಾರದ ಹಣ ಕೇರಳದ ಜನರ ಪುನರ್ವಸತಿಗೆ ಏಕೆ ಹೋಗಬೇಕು ಎಂಬುದು ಇಲ್ಲಿ ಪ್ರಶ್ನೆಯಾಗಿದ್ದು, ಹೊಸ ವಿವಾದ ಸೃಷ್ಟಿಯಾಗಿದೆ. ಊರಿಗೆ ಉಪಕಾರಿ ಮನೆಗೆ ಮಾರಿಯಂತೆ ವರ್ತಿಸುತ್ತಿದ್ದೀರಿ ಎಂದು ರಾಜ್ಯದ ವಿಪಕ್ಷ ನಾಯಕರು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಈ ವಿವರವೂ ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿಗಳ ಕಂಪ್ಲೀಟ್ ನ್ಯೂಸ್ ಪ್ಯಾಕೇಜ್ ನ್ಯೂಸ್‌ ಅವರ್‌ನಲ್ಲಿ ನೋಡಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more