ವರುಣದಲ್ಲಿ ಸೋಮಣ್ಣರನ್ನ ಹರಕೆ ಕುರಿ ಮಾಡಲಾಗ್ತಿದೆ; ಬಿ.ಎಲ್. ಸಂತೋಷ್‌ ಒತ್ತಡವೇ ಕಾರಣ: ಸಿದ್ದರಾಮಯ್ಯ

Apr 18, 2023, 6:32 PM IST

ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಲವು ಕ್ಷೇತ್ರಗಳು ಜಿದ್ದಾಜಿದ್ದಿನ ಕಣವಾಗಿ ಮಾರ್ಪಾಡಾಗುತ್ತಿದೆ. ಈ ಪೈಕಿ ವರುಣ ಕ್ಷೇತ್ರವೂ ಒಂದು. ವರುಣ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯಗೆ ಠಕ್ಕರ್‌ ಕೊಡಲು ನಿಲ್ಲಿಸಲಾಗಿದೆ. ಆದರೆ, ಈ ಬಗ್ಗೆ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದು, ಸೋಮಣ್ಣ ಸ್ಪರ್ಧೆಗೆ ಬಿ.ಎಲ್.ಸಂತೋಷ್‌ ಅವರ ಒತ್ತಡವೇ ಕಾರಣ. ಸೋಮಣ್ಣನನ್ನು ಹರಕೆಯ ಕುರಿ ಮಾಡಲಾಗುತ್ತಿದೆ, ದುಡ್ಡಿರುವ ಒಬ್ಬನು ಬೇಕು ಎಂದು ಇಲ್ಲಿಗೆ ತಂದು ಹಾಕಲಾಗಿದೆ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ. ಅಲ್ಲದೆ, ಸೋಮಣ್ಣ ಹೊರ ಜಿಲ್ಲೆಯವನು. ಅವನಿಗೆ ವರುಣ ಕ್ಷೇತ್ರದ ಬಗ್ಗೆ ಏನು ಗೊತ್ತಿದೆ? ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ವರುಣಗೆ ಒಂದೇ ಒಂದು ಮನೆ ಕೊಟ್ಟಿದ್ದನಾ ಎಂದೂ ಮೈಸೂರಿನಲ್ಲಿ  
ಮಾಜಿ ಸಿಎಂ ವಾಗ್ದಾಳಿ ನಡೆಸಿದ್ದಾರೆ.