Party Rounds: ರಾಹುಲ್‌ ಗಾಂಧಿ ಸಂಸದ ಸ್ಥಾನ ಮತ್ತೆ ಸಿಗುತ್ತಾ? ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಚಾಟಿ!

Party Rounds: ರಾಹುಲ್‌ ಗಾಂಧಿ ಸಂಸದ ಸ್ಥಾನ ಮತ್ತೆ ಸಿಗುತ್ತಾ? ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಚಾಟಿ!

Published : Aug 04, 2023, 08:18 PM IST

'ಮೋದಿ ಸರ್‌ನೇಮ್' ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಮತ್ತು ಕೆಲವು ದಿನಗಳಿಂದ ಯುರೋಪ್ ಪ್ರವಾಸದಲ್ಲಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮರಳಿದ್ದಾರೆ. 

ಬೆಂಗಳೂರು (ಆ.04): 'ಮೋದಿ ಸರ್‌ನೇಮ್' ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ ರಾಹುಲ್ ಗಾಂಧಿ ಅವರು ಸಂಸದ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ. ಮೋದಿ ಸರ್‌ನೇಮ್‌ನವರೆಲ್ಲ ಕಳ್ಳರು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ ಆ ಶಿಕ್ಷೆಗೆ ತಡೆ ಬಂದಿರುವುದರಿಂದ ರಾಹುಲ್ ಗಾಂಧಿ ಅವರು ಕಳೆದುಕೊಂಡಿದ್ದ ಸಂಸತ್ ಸದಸ್ಯತ್ವ ವಾಪಸ್ ಸಿಕ್ಕಂತಾಗಿದೆ. ಅವರು ಪ್ರಸ್ತುತ ನಡೆಯುತ್ತಿರುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ದೊರಕಿದೆ. 

ಅಲ್ಲದೆ, ಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ಆಡ್ಡಿ ಕೂಡ ನಿವಾರಣೆಯಾಗಿದೆ. ಅರ್ಜಿದಾರರು (ರಾಹುಲ್ ಗಾಂಧಿ) ನೀಡಿರುವ ಹೇಳಿಕೆ ಉತ್ತಮ ಅಭಿರುಚಿಯಿಂದ ಕೂಡಿಲ್ಲ ಎಂಬುದರಲ್ಲಿ ಅನುಮಾನವಿಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್, ಮುಂದೆ ಭಾಷಣಗಳನ್ನು ಮಾಡುವಾಗ ಅರ್ಜಿದಾರರು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಸೂಚನೆ ನೀಡಿದೆ. ಇನ್ನು ಕೆಲವು ದಿನಗಳಿಂದ ಯುರೋಪ್ ಪ್ರವಾಸದಲ್ಲಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮರಳಿದ್ದಾರೆ. ಇವರು ಪ್ರವಾಸದಿಂದ ಹಿಂದಿರುಗಿದ ಕ್ಷಣದಿಂದ ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮಿಷನ್‌ ಸಂಗ್ರಹ ಮುಂತಾಗಿ ಆರೋಪಗಳನ್ನು ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more