Party Rounds: ರಾಹುಲ್‌ ಗಾಂಧಿ ಸಂಸದ ಸ್ಥಾನ ಮತ್ತೆ ಸಿಗುತ್ತಾ? ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಚಾಟಿ!

Party Rounds: ರಾಹುಲ್‌ ಗಾಂಧಿ ಸಂಸದ ಸ್ಥಾನ ಮತ್ತೆ ಸಿಗುತ್ತಾ? ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಚ್‌ಡಿಕೆ ಚಾಟಿ!

Published : Aug 04, 2023, 08:18 PM IST

'ಮೋದಿ ಸರ್‌ನೇಮ್' ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಮತ್ತು ಕೆಲವು ದಿನಗಳಿಂದ ಯುರೋಪ್ ಪ್ರವಾಸದಲ್ಲಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮರಳಿದ್ದಾರೆ. 

ಬೆಂಗಳೂರು (ಆ.04): 'ಮೋದಿ ಸರ್‌ನೇಮ್' ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯವು ವಿಧಿಸಿರುವ ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ ರಾಹುಲ್ ಗಾಂಧಿ ಅವರು ಸಂಸದ ಸ್ಥಾನವನ್ನು ಮರಳಿ ಪಡೆಯಲಿದ್ದಾರೆ. ಮೋದಿ ಸರ್‌ನೇಮ್‌ನವರೆಲ್ಲ ಕಳ್ಳರು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿದ್ದ ಎರಡು ವರ್ಷಗಳ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗ ಆ ಶಿಕ್ಷೆಗೆ ತಡೆ ಬಂದಿರುವುದರಿಂದ ರಾಹುಲ್ ಗಾಂಧಿ ಅವರು ಕಳೆದುಕೊಂಡಿದ್ದ ಸಂಸತ್ ಸದಸ್ಯತ್ವ ವಾಪಸ್ ಸಿಕ್ಕಂತಾಗಿದೆ. ಅವರು ಪ್ರಸ್ತುತ ನಡೆಯುತ್ತಿರುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ದೊರಕಿದೆ. 

ಅಲ್ಲದೆ, ಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ಆಡ್ಡಿ ಕೂಡ ನಿವಾರಣೆಯಾಗಿದೆ. ಅರ್ಜಿದಾರರು (ರಾಹುಲ್ ಗಾಂಧಿ) ನೀಡಿರುವ ಹೇಳಿಕೆ ಉತ್ತಮ ಅಭಿರುಚಿಯಿಂದ ಕೂಡಿಲ್ಲ ಎಂಬುದರಲ್ಲಿ ಅನುಮಾನವಿಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್, ಮುಂದೆ ಭಾಷಣಗಳನ್ನು ಮಾಡುವಾಗ ಅರ್ಜಿದಾರರು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಸೂಚನೆ ನೀಡಿದೆ. ಇನ್ನು ಕೆಲವು ದಿನಗಳಿಂದ ಯುರೋಪ್ ಪ್ರವಾಸದಲ್ಲಿದ್ದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ರಾಜ್ಯಕ್ಕೆ ಮರಳಿದ್ದಾರೆ. ಇವರು ಪ್ರವಾಸದಿಂದ ಹಿಂದಿರುಗಿದ ಕ್ಷಣದಿಂದ ರಾಜ್ಯ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮಿಷನ್‌ ಸಂಗ್ರಹ ಮುಂತಾಗಿ ಆರೋಪಗಳನ್ನು ಮಾಡಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more