Aug 1, 2020, 3:19 PM IST
ಬೆಂಗಳೂರು, (ಆ.01): ಸಂಪುಟ ವಿಸ್ತರಣೆಯೋ ಸಂಪುಟ ಪುನಾರಚನೆಯೋ ಎಂಬ ಗೊಂದಲದ ಚರ್ಚೆಯ ನಡುವೆ ಸಂಪುಟ ವಿಸ್ತರಣೆ ಶೀಘ್ರದಲ್ಲಿ ನಡೆಯುತ್ತದೆ ಎಂಬ ಸುದ್ದಿ ಕೇಳಿಬರುತ್ತಿದೆ. 34 ಸ್ಥಾನಗಳ ಪೈಕಿ ಬಾಕಿ ಉಳಿದಿರುವ 6 ಸ್ಥಾನಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವ ನಿಟ್ಟಿನಲ್ಲಿ ಬಿಎಸ್ವೈ ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ.
ನಿರ್ಧಾರ ಬದಲಿಸಿದ ಸಿಎಂ, ಪುನಾರಚನೆ ಬದಲು ವಿಸ್ತರಣೆ, ಯಾರಿಗೆ ಅದೃಷ್ಟ?
ಅಲ್ಲದೇ ಕೆಲ ಸಚಿವರಿಗೆ ಕೊಕ್ ನೀಡಲು ಸಹ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದ್ರೆ, ಯಾರಿಗೆ ಸಚಿವ ಸ್ಥಾನ..? ಯಾರಿಗೆ ಕೊಕ್ ಎನ್ನುವುದು ಫುಲ್ ಸಸ್ಪೆನ್ಸ್ ಆಗಿದೆ.