Suvarna Focus: ದೊಡ್ಡಗೌಡರ ಭದ್ರಕೋಟೆಯಲ್ಲಿ ಪ್ರಧಾನಿ! ಮಂಡ್ಯದಲ್ಲಿ ಮೋದಿಗಿರಿ ಪ್ರದರ್ಶನ!

Suvarna Focus: ದೊಡ್ಡಗೌಡರ ಭದ್ರಕೋಟೆಯಲ್ಲಿ ಪ್ರಧಾನಿ! ಮಂಡ್ಯದಲ್ಲಿ ಮೋದಿಗಿರಿ ಪ್ರದರ್ಶನ!

Published : Mar 13, 2023, 04:36 PM IST

ಮಂಡ್ಯದಲ್ಲಿ ಮೋದಿಗಿರಿಯನ್ನು ನಡೆಸಲಾಗಿದೆ. ಮಂಡ್ಯ ಜನರ ಪ್ರೀತಿಗೆ ಮರುಳಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಬಾಗಿ ನಮಸ್ಕಾರ ಮಾಡಿದ್ದಾರೆ. ಇನ್ನು ಸಬ್‌ಕೋ ಸಾಥ್‌ ಸಬ್‌ಕಾ ವಿಕಾಸ್‌ ಮಂತ್ರವನ್ನು ಪಠಿಸಿದ್ದಾರೆ.

ಬೆಂಗಳೂರು (ಮಾ.13): ಹಸಿರು ಶಾಲು.. ಮೈಸೂರು ಪೇಟ ಧರಿಸಿ ಮೋದಿ ಝಗಮಗ ಅಂತಿದ್ರು.. ಕೈಲಿ ಮಂಡ್ಯ ಬೆಲ್ಲ ಇಟ್ಕೊಂಡಿದ್ದ ಮೋದಿ ಅವರ ಅಬ್ಬರ ಮಧುರ ನಗರದಲ್ಲಿ  ಹೇಗಿತ್ತು ಗೊತ್ತಾ..? ದೊಡ್ಡಗೌಡರ ಭದ್ರಕೋಟೆಯಲ್ಲಿ ಮೋದಿ ಹೆಣೆದ ವಿಚಿತ್ರ ವ್ಯೂಹ ಎಂಥದ್ದು ಗೊತ್ತಾ..? ಜಿಡಿಎಸ್ ಹೆಸರೂ ಹೇಳಲಿಲ್ಲ.. ಕಾಂಗ್ರೆಸ್ ವಿರುದ್ಧ ಹರಿಹಾಯೋದು ಮರೀಲಿಲ್ಲ.. ಈ ತಂತ್ರವೇ ಮಂಡ್ಯದಲ್ಲಿ ಕಮಲ ಅರಳಿಸುತ್ತಾ.? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮಂಡ್ಯದಲ್ಲಿ ಮೋದಿಗಿರಿ..
ಮಂಡ್ಯದಲ್ಲಿ ಮೋದಿಗಿರಿಯನ್ನು ನಡೆಸಲಾಗಿದೆ. ಮಂಡ್ಯ ಜನರ ಪ್ರೀತಿಗೆ ಮರುಳಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಬಾಗಿ ನಮಸ್ಕಾರ ಮಾಡಿದ್ದಾರೆ. ಇನ್ನು ಸಬ್‌ಕೋ ಸಾಥ್‌ ಸಬ್‌ಕಾ ವಿಕಾಸ್‌ ಮಂತ್ರವನ್ನು ಪಠಿಸಿದ್ದಾರೆ. ಇನ್ನು ಮೈಸೂರು ಸಾಮ್ರಾಜ್ಯದ ಒಡೆಯರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ವಿಶ್ವೇಶ್ವರಯ್ಯ ಅವರ ಕಾರ್ಯ ವೈಖರಿಯ ಬಗ್ಗೆ ದೇಶವೇ ಕೊಂಡಾಡಿದ ಬಗ್ಗೆ ಮಂಡ್ಯದ ವೇದಿಕೆಯಲ್ಲಿ ಹೇಳಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಕರ್ನಾಟಕದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕು, ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ಕೂಡ ಮಂಡ್ಯದ ಜನರು ನಿರ್ಧಾರ ಮಾಡುತ್ತಾರೆ. ಮಂಡ್ಯ ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಥಮ ಬಾರಿಗೆ ಆಗಮಿಸಿದ್ದರು. ಹೀಗಾಗಿ, 50ಕ್ಕೂ ಅಧಿಕ ಕಲಾತಂಡಗಳು, 500ಕ್ಕೂ ಅಧಿಕ ಕಲಾವಿದರು ಹಾಗೂ ಲಕ್ಷಾಂತರ ಅಭಿಮಾನಿಗಳು ಅವರನ್ನು ನೋಡಲು ಹಾಗೂ ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದರು. ಅಂತೂ ಇಂತೂ ಮೋದಿ ಸಕ್ಕರೆ ನಾಡಿನಲ್ಲಿ ಹವಾ ಮೆರೆಸಲು ಸಾಧ್ಯವಾಗಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more