Suvarna Focus: ದೊಡ್ಡಗೌಡರ ಭದ್ರಕೋಟೆಯಲ್ಲಿ ಪ್ರಧಾನಿ! ಮಂಡ್ಯದಲ್ಲಿ ಮೋದಿಗಿರಿ ಪ್ರದರ್ಶನ!

Suvarna Focus: ದೊಡ್ಡಗೌಡರ ಭದ್ರಕೋಟೆಯಲ್ಲಿ ಪ್ರಧಾನಿ! ಮಂಡ್ಯದಲ್ಲಿ ಮೋದಿಗಿರಿ ಪ್ರದರ್ಶನ!

Published : Mar 13, 2023, 04:36 PM IST

ಮಂಡ್ಯದಲ್ಲಿ ಮೋದಿಗಿರಿಯನ್ನು ನಡೆಸಲಾಗಿದೆ. ಮಂಡ್ಯ ಜನರ ಪ್ರೀತಿಗೆ ಮರುಳಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಬಾಗಿ ನಮಸ್ಕಾರ ಮಾಡಿದ್ದಾರೆ. ಇನ್ನು ಸಬ್‌ಕೋ ಸಾಥ್‌ ಸಬ್‌ಕಾ ವಿಕಾಸ್‌ ಮಂತ್ರವನ್ನು ಪಠಿಸಿದ್ದಾರೆ.

ಬೆಂಗಳೂರು (ಮಾ.13): ಹಸಿರು ಶಾಲು.. ಮೈಸೂರು ಪೇಟ ಧರಿಸಿ ಮೋದಿ ಝಗಮಗ ಅಂತಿದ್ರು.. ಕೈಲಿ ಮಂಡ್ಯ ಬೆಲ್ಲ ಇಟ್ಕೊಂಡಿದ್ದ ಮೋದಿ ಅವರ ಅಬ್ಬರ ಮಧುರ ನಗರದಲ್ಲಿ  ಹೇಗಿತ್ತು ಗೊತ್ತಾ..? ದೊಡ್ಡಗೌಡರ ಭದ್ರಕೋಟೆಯಲ್ಲಿ ಮೋದಿ ಹೆಣೆದ ವಿಚಿತ್ರ ವ್ಯೂಹ ಎಂಥದ್ದು ಗೊತ್ತಾ..? ಜಿಡಿಎಸ್ ಹೆಸರೂ ಹೇಳಲಿಲ್ಲ.. ಕಾಂಗ್ರೆಸ್ ವಿರುದ್ಧ ಹರಿಹಾಯೋದು ಮರೀಲಿಲ್ಲ.. ಈ ತಂತ್ರವೇ ಮಂಡ್ಯದಲ್ಲಿ ಕಮಲ ಅರಳಿಸುತ್ತಾ.? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮಂಡ್ಯದಲ್ಲಿ ಮೋದಿಗಿರಿ..
ಮಂಡ್ಯದಲ್ಲಿ ಮೋದಿಗಿರಿಯನ್ನು ನಡೆಸಲಾಗಿದೆ. ಮಂಡ್ಯ ಜನರ ಪ್ರೀತಿಗೆ ಮರುಳಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಬಾಗಿ ನಮಸ್ಕಾರ ಮಾಡಿದ್ದಾರೆ. ಇನ್ನು ಸಬ್‌ಕೋ ಸಾಥ್‌ ಸಬ್‌ಕಾ ವಿಕಾಸ್‌ ಮಂತ್ರವನ್ನು ಪಠಿಸಿದ್ದಾರೆ. ಇನ್ನು ಮೈಸೂರು ಸಾಮ್ರಾಜ್ಯದ ಒಡೆಯರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ವಿಶ್ವೇಶ್ವರಯ್ಯ ಅವರ ಕಾರ್ಯ ವೈಖರಿಯ ಬಗ್ಗೆ ದೇಶವೇ ಕೊಂಡಾಡಿದ ಬಗ್ಗೆ ಮಂಡ್ಯದ ವೇದಿಕೆಯಲ್ಲಿ ಹೇಳಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಕರ್ನಾಟಕದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕು, ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ಕೂಡ ಮಂಡ್ಯದ ಜನರು ನಿರ್ಧಾರ ಮಾಡುತ್ತಾರೆ. ಮಂಡ್ಯ ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಥಮ ಬಾರಿಗೆ ಆಗಮಿಸಿದ್ದರು. ಹೀಗಾಗಿ, 50ಕ್ಕೂ ಅಧಿಕ ಕಲಾತಂಡಗಳು, 500ಕ್ಕೂ ಅಧಿಕ ಕಲಾವಿದರು ಹಾಗೂ ಲಕ್ಷಾಂತರ ಅಭಿಮಾನಿಗಳು ಅವರನ್ನು ನೋಡಲು ಹಾಗೂ ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದರು. ಅಂತೂ ಇಂತೂ ಮೋದಿ ಸಕ್ಕರೆ ನಾಡಿನಲ್ಲಿ ಹವಾ ಮೆರೆಸಲು ಸಾಧ್ಯವಾಗಿದೆ. 

24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
Read more