Suvarna Focus: ದೊಡ್ಡಗೌಡರ ಭದ್ರಕೋಟೆಯಲ್ಲಿ ಪ್ರಧಾನಿ! ಮಂಡ್ಯದಲ್ಲಿ ಮೋದಿಗಿರಿ ಪ್ರದರ್ಶನ!

Suvarna Focus: ದೊಡ್ಡಗೌಡರ ಭದ್ರಕೋಟೆಯಲ್ಲಿ ಪ್ರಧಾನಿ! ಮಂಡ್ಯದಲ್ಲಿ ಮೋದಿಗಿರಿ ಪ್ರದರ್ಶನ!

Published : Mar 13, 2023, 04:36 PM IST

ಮಂಡ್ಯದಲ್ಲಿ ಮೋದಿಗಿರಿಯನ್ನು ನಡೆಸಲಾಗಿದೆ. ಮಂಡ್ಯ ಜನರ ಪ್ರೀತಿಗೆ ಮರುಳಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಬಾಗಿ ನಮಸ್ಕಾರ ಮಾಡಿದ್ದಾರೆ. ಇನ್ನು ಸಬ್‌ಕೋ ಸಾಥ್‌ ಸಬ್‌ಕಾ ವಿಕಾಸ್‌ ಮಂತ್ರವನ್ನು ಪಠಿಸಿದ್ದಾರೆ.

ಬೆಂಗಳೂರು (ಮಾ.13): ಹಸಿರು ಶಾಲು.. ಮೈಸೂರು ಪೇಟ ಧರಿಸಿ ಮೋದಿ ಝಗಮಗ ಅಂತಿದ್ರು.. ಕೈಲಿ ಮಂಡ್ಯ ಬೆಲ್ಲ ಇಟ್ಕೊಂಡಿದ್ದ ಮೋದಿ ಅವರ ಅಬ್ಬರ ಮಧುರ ನಗರದಲ್ಲಿ  ಹೇಗಿತ್ತು ಗೊತ್ತಾ..? ದೊಡ್ಡಗೌಡರ ಭದ್ರಕೋಟೆಯಲ್ಲಿ ಮೋದಿ ಹೆಣೆದ ವಿಚಿತ್ರ ವ್ಯೂಹ ಎಂಥದ್ದು ಗೊತ್ತಾ..? ಜಿಡಿಎಸ್ ಹೆಸರೂ ಹೇಳಲಿಲ್ಲ.. ಕಾಂಗ್ರೆಸ್ ವಿರುದ್ಧ ಹರಿಹಾಯೋದು ಮರೀಲಿಲ್ಲ.. ಈ ತಂತ್ರವೇ ಮಂಡ್ಯದಲ್ಲಿ ಕಮಲ ಅರಳಿಸುತ್ತಾ.? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಫೋಕಸ್, ಮಂಡ್ಯದಲ್ಲಿ ಮೋದಿಗಿರಿ..
ಮಂಡ್ಯದಲ್ಲಿ ಮೋದಿಗಿರಿಯನ್ನು ನಡೆಸಲಾಗಿದೆ. ಮಂಡ್ಯ ಜನರ ಪ್ರೀತಿಗೆ ಮರುಳಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶಿರಬಾಗಿ ನಮಸ್ಕಾರ ಮಾಡಿದ್ದಾರೆ. ಇನ್ನು ಸಬ್‌ಕೋ ಸಾಥ್‌ ಸಬ್‌ಕಾ ವಿಕಾಸ್‌ ಮಂತ್ರವನ್ನು ಪಠಿಸಿದ್ದಾರೆ. ಇನ್ನು ಮೈಸೂರು ಸಾಮ್ರಾಜ್ಯದ ಒಡೆಯರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹಾಗೂ ವಿಶ್ವೇಶ್ವರಯ್ಯ ಅವರ ಕಾರ್ಯ ವೈಖರಿಯ ಬಗ್ಗೆ ದೇಶವೇ ಕೊಂಡಾಡಿದ ಬಗ್ಗೆ ಮಂಡ್ಯದ ವೇದಿಕೆಯಲ್ಲಿ ಹೇಳಿಕೊಂಡಿದ್ದಾರೆ. ಮಂಡ್ಯ ಜಿಲ್ಲೆ ಕರ್ನಾಟಕದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬೇಕು, ಯಾರು ಮುಖ್ಯಮಂತ್ರಿ ಆಗಬೇಕು ಎನ್ನುವುದನ್ನು ಕೂಡ ಮಂಡ್ಯದ ಜನರು ನಿರ್ಧಾರ ಮಾಡುತ್ತಾರೆ. ಮಂಡ್ಯ ನಗರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಥಮ ಬಾರಿಗೆ ಆಗಮಿಸಿದ್ದರು. ಹೀಗಾಗಿ, 50ಕ್ಕೂ ಅಧಿಕ ಕಲಾತಂಡಗಳು, 500ಕ್ಕೂ ಅಧಿಕ ಕಲಾವಿದರು ಹಾಗೂ ಲಕ್ಷಾಂತರ ಅಭಿಮಾನಿಗಳು ಅವರನ್ನು ನೋಡಲು ಹಾಗೂ ಸ್ವಾಗತಿಸಲು ಕಾತುರದಿಂದ ಕಾಯುತ್ತಿದ್ದರು. ಅಂತೂ ಇಂತೂ ಮೋದಿ ಸಕ್ಕರೆ ನಾಡಿನಲ್ಲಿ ಹವಾ ಮೆರೆಸಲು ಸಾಧ್ಯವಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more