Suvarna Special: ಮತ್ತೆ ಕಾಡುತ್ತಿದೆ ನವಂಬರ್ ನಿಗೂಢ ರಹಸ್ಯ! 5 ವರ್ಷ ನಾನೇ ಸಿಎಂ.. ಸಿದ್ದು ಪ್ರತಿಜ್ಞೆ!

Suvarna Special: ಮತ್ತೆ ಕಾಡುತ್ತಿದೆ ನವಂಬರ್ ನಿಗೂಢ ರಹಸ್ಯ! 5 ವರ್ಷ ನಾನೇ ಸಿಎಂ.. ಸಿದ್ದು ಪ್ರತಿಜ್ಞೆ!

Published : Oct 03, 2025, 06:42 PM IST

Siddaramaiah Firm on Full Term Amidst Karnataka November Kranthi Buzz  ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಹಂಚಿಕೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಎರಡೂವರೆ ವರ್ಷದ ಅವಧಿ ಸಮೀಪಿಸುತ್ತಿದ್ದಂತೆ ಅಧಿಕಾರ ಬದಲಾವಣೆಯ ಮಾತುಗಳು ಕೇಳಿಬರುತ್ತಿದೆ.

ಬೆಂಗಳೂರು (ಅ.3): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನಾಯಕತ್ವದ ಹಂಚಿಕೆ ಕುರಿತು ಕೇಳಿಬರುತ್ತಿದ್ದ ನಿಗೂಢ ರಹಸ್ಯ ಮತ್ತೊಮ್ಮೆ ತೀವ್ರಗೊಂಡಿದೆ. ಏಕೆಂದರೆ ಶೀಘ್ರದಲ್ಲೇ ಸಮ್ಮಿಶ್ರ ಸರ್ಕಾರದ ಎರಡೂವರೆ ವರ್ಷದ ಅವಧಿ ಪೂರ್ಣಗೊಳ್ಳುವ ಸಂದರ್ಭ ಎದುರಾಗಿದ್ದು, ಮತ್ತೊಮ್ಮೆ ಅಧಿಕಾರ ಬದಲಾವಣೆಯ ಮಾತುಗಳು ರಾಜಕೀಯ ವಲಯದಲ್ಲಿ ಮಾರ್ದನಿಸುತ್ತಿವೆ.

ಸೆಪ್ಟೆಂಬರ್ ತಿಂಗಳು ಕಳೆದು ಅಕ್ಟೋಬರ್ ಆರಂಭವಾಗುತ್ತಿದ್ದಂತೆಯೇ, ಇಡೀ ಕೈ ಕೋಟೆಯೊಳಗೆ ನವೆಂಬರ್ ಕ್ರಾಂತಿಯ ರಣ ಕಹಳೆ ಮೊಳಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಕರೂರು ಕಾಲ್ತುಳಿತ ಬೆನ್ನಲ್ಲೇ ದಳಪತಿ ವಿಜಯ್ ಮೇಲೆ ಚಪ್ಪಲಿ ಎಸೆತ ಮತ್ತು ಬಾಂಬ್ ಬೆದರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ಮತ್ತು ಪ್ರಭಾವಿ ನಾಯಕರು. ಅವರು ಯಾವುದಕ್ಕಾದರೂ ಪಟ್ಟು ಹಿಡಿದರು ಅಂದರೆ, ಅದನ್ನು ಸಾಧಿಸಿಯೇ ಸಿದ್ಧ. ಈ ಹಿನ್ನೆಲೆಯಲ್ಲಿ, "ಐದು ವರ್ಷ ನಾನೇ ಸಿಎಂ" ಎಂಬರ್ಥದಲ್ಲಿ ಅವರ ಪ್ರತಿಜ್ಞೆ ಇದೆ ಎಂದು ಅವರ ಆಪ್ತ ಮೂಲಗಳು ಹೇಳುತ್ತಿವೆ. ಇಷ್ಟು ಸುಲಭವಾಗಿ ಅವರು ಪಟ್ಟ ಬಿಟ್ಟುಕೊಡುವುದಿಲ್ಲ ಎಂಬುದು ರಾಜಕೀಯ ಲೆಕ್ಕಾಚಾರವಾಗಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more