suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

Published : Mar 07, 2023, 02:06 PM IST

ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಬೆಳಗಾವಿಯ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಬೆಳಗಾವಿ (ಮಾ.07): ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಸವಾಲ್ ಹಾಕಿದ್ದಾರೆ.  50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಶಿವಾಜಿ ಪ್ರತಿಮೆ ಉದ್ಘಾಟನೆ ರಾಜಕೀಯ ಜಿದ್ದಾಜಿದ್ದಿಯ ಜ್ವಾಲಾಮುಖಿಯಾಗಿ ಧಗಧಗಿಸಲು ಕಾರಣ ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಪ್ರತಿಷ್ಠೆಯೇ ಪ್ರಮುಖ ಕಾರಣವಾಗಿದೆ. ಹಾಗಾದ್ರೆ ಈ ಜಟಾಪಟಿಯಲ್ಲಿ ಗೆದ್ದದ್ದು ಯಾರು..? ಸಾಹುಕಾರನಾ..? ಹೆಬ್ಬಾಳ್ಕರಾ..? ಇದ್ರಿಂದ ಶಾಸಕಿ ಹೆಬ್ಬಾಳ್ಕರ್"ಗೆ ಆದ ರಾಜಕೀಯ ಲಾಭವೇನು..? ಜಾರಕಿಹೊಳಿ ವಿರುದ್ಧ ಯುದ್ಧ ಸಾರಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಿಂದೆ ಬೆಳಗಾವಿ ಬಿಜೆಪಿಯಲ್ಲಿನ ಜಾರಕಿಹೊಳಿ ವಿರೋಧಿ ಗುಂಪು ನಿಂತಿದ್ಯಾ..? ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ.

ಒಂದ್ಕಡೆ ಲಕ್ಷ್ಮೀ ಪಟಾಕಿ, ಮತ್ತೊಂದ್ಕಡೆ ಸಾಹುಕಾರನ ಸೇಡು... ಈ ಜಟಾಪಟಿಗೆ ಶಿವಾಜಿ ಪ್ರತಿಮೆ ಉದ್ಘಾಟನೆಯೇ ವೇದಿಕೆ. ಹಠ, ಕೋಪ, ದ್ವೇಷದ ಕಾರಣಗಳಿಗಾಗಿ ರಾಜಕಾರಣ ತನ್ನ ಮಗ್ಗುಲು ಬದಲಿಸಿದ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ರಾಜ್ಯ ರಾಜಕಾರಣವೂ ಕಾಲ ಕಾಲಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಹಾಗಾದ್ರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಮಧ್ಯೆ ಹೊತ್ತಿಕೊಂಡಿರೋ ಸೇಡಿನ ಜ್ವಾಲೆ, ರಾಜ್ಯ ರಾಜಕಾರಣಕ್ಕೆ ಟ್ವಿಸ್ಟ್ ಕೊಡಲಿದ್ಯಾ..? ಎಂಬುದನ್ನು ನಾವು ಕಾದುನೋಡಬೇಕಿದೆ.

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more