suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

suvarna special: ಲಕ್ಷ್ಮೀ ಹೆಬ್ಬಾಳ್ಕರ್ vs ಜಾರಕಿಹೊಳಿ ಮಧ್ಯೆ ನೀನಾ.. ನಾನಾ.. ಕಾಳಗ..!

Published : Mar 07, 2023, 02:06 PM IST

ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಬೆಳಗಾವಿಯ 50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಬೆಳಗಾವಿ (ಮಾ.07): ಸಾಹುಕಾರ ರಮೇಶ್‌ ಜಾರಕಿಹೊಳಿ Vs ಲಕ್ಷ್ಮೀ ಹೆಬ್ಬಾಳ್ಕರ್ ಗೆಲುವಿನ ಓಟ ಮುಂದುವರಸಲು ಅಖಾಡಕ್ಕೆ ಇಳಿದಿದ್ದಾರೆ. ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಗೆ ಸವಾಲ್ ಹಾಕಿದ್ದಾರೆ.  50 ಅಡಿ ಎತ್ತರದ ಶಿವಾಜಿ ಪ್ರತಿಮೆ ಲೋಕಾರ್ಪಣೆ ಕಾರ್ಯ ರಾಜಕೀಯ ರಣರಂಗವಾಗಿ ಮಾರ್ಪಟ್ಟಿದೆ.

ಶಿವಾಜಿ ಪ್ರತಿಮೆ ಉದ್ಘಾಟನೆ ರಾಜಕೀಯ ಜಿದ್ದಾಜಿದ್ದಿಯ ಜ್ವಾಲಾಮುಖಿಯಾಗಿ ಧಗಧಗಿಸಲು ಕಾರಣ ಗೋಕಾಕ್ ಸಾಹುಕಾರ ರಮೇಶ್ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಪ್ರತಿಷ್ಠೆಯೇ ಪ್ರಮುಖ ಕಾರಣವಾಗಿದೆ. ಹಾಗಾದ್ರೆ ಈ ಜಟಾಪಟಿಯಲ್ಲಿ ಗೆದ್ದದ್ದು ಯಾರು..? ಸಾಹುಕಾರನಾ..? ಹೆಬ್ಬಾಳ್ಕರಾ..? ಇದ್ರಿಂದ ಶಾಸಕಿ ಹೆಬ್ಬಾಳ್ಕರ್"ಗೆ ಆದ ರಾಜಕೀಯ ಲಾಭವೇನು..? ಜಾರಕಿಹೊಳಿ ವಿರುದ್ಧ ಯುದ್ಧ ಸಾರಿರೋ ಲಕ್ಷ್ಮೀ ಹೆಬ್ಬಾಳ್ಕರ್ ಹಿಂದೆ ಬೆಳಗಾವಿ ಬಿಜೆಪಿಯಲ್ಲಿನ ಜಾರಕಿಹೊಳಿ ವಿರೋಧಿ ಗುಂಪು ನಿಂತಿದ್ಯಾ..? ಎನ್ನುವುದು ಅನುಮಾನಕ್ಕೆ ಕಾರಣವಾಗಿದೆ.

ಒಂದ್ಕಡೆ ಲಕ್ಷ್ಮೀ ಪಟಾಕಿ, ಮತ್ತೊಂದ್ಕಡೆ ಸಾಹುಕಾರನ ಸೇಡು... ಈ ಜಟಾಪಟಿಗೆ ಶಿವಾಜಿ ಪ್ರತಿಮೆ ಉದ್ಘಾಟನೆಯೇ ವೇದಿಕೆ. ಹಠ, ಕೋಪ, ದ್ವೇಷದ ಕಾರಣಗಳಿಗಾಗಿ ರಾಜಕಾರಣ ತನ್ನ ಮಗ್ಗುಲು ಬದಲಿಸಿದ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ರಾಜ್ಯ ರಾಜಕಾರಣವೂ ಕಾಲ ಕಾಲಕ್ಕೆ ಸಾಕ್ಷಿಯಾಗುತ್ತಾ ಬಂದಿದೆ. ಹಾಗಾದ್ರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಮಧ್ಯೆ ಹೊತ್ತಿಕೊಂಡಿರೋ ಸೇಡಿನ ಜ್ವಾಲೆ, ರಾಜ್ಯ ರಾಜಕಾರಣಕ್ಕೆ ಟ್ವಿಸ್ಟ್ ಕೊಡಲಿದ್ಯಾ..? ಎಂಬುದನ್ನು ನಾವು ಕಾದುನೋಡಬೇಕಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more