ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

Published : Jan 27, 2023, 02:18 PM IST

ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಆಣೆ ಪ್ರಮಾಣ ನಡೆದಿದೆ. ಎಲ್ಲರ ಕೈ ಮುಂದಿಟ್ಟು ಆಣೆ ಪ್ರಮಾಣ ಭೋದಿಸಿರುವ ಸಚಿವ ಮುನಿರತ್ನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 

ಕೋಲಾರ(ಜ.27):  ಟಿಕೆಟ್ ಕೈ ತಪ್ಪಿದ್ರೂ ಬಿಜೆಪಿ ಪಕ್ಷ ಬಿಟ್ಟೋಗಲ್ಲ ಅಂತ ಸಚಿವ ಮುನಿರತ್ನ ಆಣೆ ಪ್ರಮಾಣ ಮಾಡಿಸಿದ್ದಾರೆ. ಹೌದು, ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಪೈಪೋಟಿ ಹೆಚ್ಚಾಗಿದೆ. ಬಂಗಾರಪೇಟೆ ತಾಲೂಕು BJP ಟಿಕೆಟ್‌ಗಾಗಿ ಮಾಜಿ ಶಾಸಕರಾದ ಎಂ. ನಾರಾಯಣಸ್ವಾಮಿ, ವೆಂಕಟಮುನಿಯಪ್ಪ ಹಾಗೂ ಬಿ.ವಿ ಮಹೇಶ್, ವಿ ಶೇಷು, ಅಮರೇಶ್ ಸೇರಿದಂತೆ 6 ಮಂದಿ ಲಾಭಿ ನಡೆಸುತ್ತಿದ್ದಾರೆ.  

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಎಂ. ನಾರಾಯಣಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ರೆ ಜೆಡಿಎಸ್‌ಗೆ ಬೆಂಬಲ ನೀಡುವ ಭೀತಿ ಎದುರಾಗಿದೆ. 2018 ರಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಎಂ. ನಾರಾಯಣಸ್ವಾಮಿ ಬಿಜೆಪಿ ಬಿಟ್ಟು ಜೆಡಿಎಸ್‌ ಪಕ್ಷ ಸೇರ್ಪಡೆಯಾಗಿದ್ದರು. ಕಳೆದ MLC ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ವಾಪಾಸ್ ಆಗಿದ್ದರು. ಪಕ್ಷಾಂತರ ಭೀತಿ ಹಿನ್ನಲೆ ಏನೇ ಬೆಳವಣಿಗೆ ಆದರೂ  ಕೋಲಾರಮ್ಮ ದೇವಿ ಆಣೆ ಪಕ್ಷಕ್ಕೆ ದ್ರೋಹ ಮಾಡಲ್ಲ ಎಂದು ಮುನಿರತ್ನ ಆಣೆ ಮಾಡಿಸಿದ್ದಾರೆ. ಮುನಿರತ್ನ ಆಣೆ ಪ್ರಮಾಣ ಮಾಡಿಸಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆಣೆ ಪ್ರಮಾಣದಲ್ಲಿ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ, ವರ್ತೂರು ಪ್ರಕಾಶ್, ಎಂ ನಾರಾಯಣಸ್ವಾಮಿ, ವೆಂಕಟಮುನಿಯಪ್ಪ. ಬಿ.ವಿ ಮಹೇಶ್, ಸಂಪಂಗಿ, ಮಂಜುನಾಥ್ ಹಾಗು ಹಲವರು ಭಾಗಿಯಾಗಿದ್ದರು. ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಆಣೆ ಪ್ರಮಾಣ ನಡೆದಿದೆ. ಎಲ್ಲರ ಕೈ ಮುಂದಿಟ್ಟು ಆಣೆ ಪ್ರಮಾಣ ಭೋದಿಸಿರುವ ಸಚಿವ ಮುನಿರತ್ನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more