ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

Published : Jan 27, 2023, 02:18 PM IST

ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಆಣೆ ಪ್ರಮಾಣ ನಡೆದಿದೆ. ಎಲ್ಲರ ಕೈ ಮುಂದಿಟ್ಟು ಆಣೆ ಪ್ರಮಾಣ ಭೋದಿಸಿರುವ ಸಚಿವ ಮುನಿರತ್ನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 

ಕೋಲಾರ(ಜ.27):  ಟಿಕೆಟ್ ಕೈ ತಪ್ಪಿದ್ರೂ ಬಿಜೆಪಿ ಪಕ್ಷ ಬಿಟ್ಟೋಗಲ್ಲ ಅಂತ ಸಚಿವ ಮುನಿರತ್ನ ಆಣೆ ಪ್ರಮಾಣ ಮಾಡಿಸಿದ್ದಾರೆ. ಹೌದು, ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಪೈಪೋಟಿ ಹೆಚ್ಚಾಗಿದೆ. ಬಂಗಾರಪೇಟೆ ತಾಲೂಕು BJP ಟಿಕೆಟ್‌ಗಾಗಿ ಮಾಜಿ ಶಾಸಕರಾದ ಎಂ. ನಾರಾಯಣಸ್ವಾಮಿ, ವೆಂಕಟಮುನಿಯಪ್ಪ ಹಾಗೂ ಬಿ.ವಿ ಮಹೇಶ್, ವಿ ಶೇಷು, ಅಮರೇಶ್ ಸೇರಿದಂತೆ 6 ಮಂದಿ ಲಾಭಿ ನಡೆಸುತ್ತಿದ್ದಾರೆ.  

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಎಂ. ನಾರಾಯಣಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ರೆ ಜೆಡಿಎಸ್‌ಗೆ ಬೆಂಬಲ ನೀಡುವ ಭೀತಿ ಎದುರಾಗಿದೆ. 2018 ರಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಎಂ. ನಾರಾಯಣಸ್ವಾಮಿ ಬಿಜೆಪಿ ಬಿಟ್ಟು ಜೆಡಿಎಸ್‌ ಪಕ್ಷ ಸೇರ್ಪಡೆಯಾಗಿದ್ದರು. ಕಳೆದ MLC ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ವಾಪಾಸ್ ಆಗಿದ್ದರು. ಪಕ್ಷಾಂತರ ಭೀತಿ ಹಿನ್ನಲೆ ಏನೇ ಬೆಳವಣಿಗೆ ಆದರೂ  ಕೋಲಾರಮ್ಮ ದೇವಿ ಆಣೆ ಪಕ್ಷಕ್ಕೆ ದ್ರೋಹ ಮಾಡಲ್ಲ ಎಂದು ಮುನಿರತ್ನ ಆಣೆ ಮಾಡಿಸಿದ್ದಾರೆ. ಮುನಿರತ್ನ ಆಣೆ ಪ್ರಮಾಣ ಮಾಡಿಸಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆಣೆ ಪ್ರಮಾಣದಲ್ಲಿ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ, ವರ್ತೂರು ಪ್ರಕಾಶ್, ಎಂ ನಾರಾಯಣಸ್ವಾಮಿ, ವೆಂಕಟಮುನಿಯಪ್ಪ. ಬಿ.ವಿ ಮಹೇಶ್, ಸಂಪಂಗಿ, ಮಂಜುನಾಥ್ ಹಾಗು ಹಲವರು ಭಾಗಿಯಾಗಿದ್ದರು. ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಆಣೆ ಪ್ರಮಾಣ ನಡೆದಿದೆ. ಎಲ್ಲರ ಕೈ ಮುಂದಿಟ್ಟು ಆಣೆ ಪ್ರಮಾಣ ಭೋದಿಸಿರುವ ಸಚಿವ ಮುನಿರತ್ನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 
 

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more