ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

Published : Jan 27, 2023, 02:18 PM IST

ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಆಣೆ ಪ್ರಮಾಣ ನಡೆದಿದೆ. ಎಲ್ಲರ ಕೈ ಮುಂದಿಟ್ಟು ಆಣೆ ಪ್ರಮಾಣ ಭೋದಿಸಿರುವ ಸಚಿವ ಮುನಿರತ್ನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 

ಕೋಲಾರ(ಜ.27):  ಟಿಕೆಟ್ ಕೈ ತಪ್ಪಿದ್ರೂ ಬಿಜೆಪಿ ಪಕ್ಷ ಬಿಟ್ಟೋಗಲ್ಲ ಅಂತ ಸಚಿವ ಮುನಿರತ್ನ ಆಣೆ ಪ್ರಮಾಣ ಮಾಡಿಸಿದ್ದಾರೆ. ಹೌದು, ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಪೈಪೋಟಿ ಹೆಚ್ಚಾಗಿದೆ. ಬಂಗಾರಪೇಟೆ ತಾಲೂಕು BJP ಟಿಕೆಟ್‌ಗಾಗಿ ಮಾಜಿ ಶಾಸಕರಾದ ಎಂ. ನಾರಾಯಣಸ್ವಾಮಿ, ವೆಂಕಟಮುನಿಯಪ್ಪ ಹಾಗೂ ಬಿ.ವಿ ಮಹೇಶ್, ವಿ ಶೇಷು, ಅಮರೇಶ್ ಸೇರಿದಂತೆ 6 ಮಂದಿ ಲಾಭಿ ನಡೆಸುತ್ತಿದ್ದಾರೆ.  

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಎಂ. ನಾರಾಯಣಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ರೆ ಜೆಡಿಎಸ್‌ಗೆ ಬೆಂಬಲ ನೀಡುವ ಭೀತಿ ಎದುರಾಗಿದೆ. 2018 ರಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಎಂ. ನಾರಾಯಣಸ್ವಾಮಿ ಬಿಜೆಪಿ ಬಿಟ್ಟು ಜೆಡಿಎಸ್‌ ಪಕ್ಷ ಸೇರ್ಪಡೆಯಾಗಿದ್ದರು. ಕಳೆದ MLC ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ವಾಪಾಸ್ ಆಗಿದ್ದರು. ಪಕ್ಷಾಂತರ ಭೀತಿ ಹಿನ್ನಲೆ ಏನೇ ಬೆಳವಣಿಗೆ ಆದರೂ  ಕೋಲಾರಮ್ಮ ದೇವಿ ಆಣೆ ಪಕ್ಷಕ್ಕೆ ದ್ರೋಹ ಮಾಡಲ್ಲ ಎಂದು ಮುನಿರತ್ನ ಆಣೆ ಮಾಡಿಸಿದ್ದಾರೆ. ಮುನಿರತ್ನ ಆಣೆ ಪ್ರಮಾಣ ಮಾಡಿಸಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆಣೆ ಪ್ರಮಾಣದಲ್ಲಿ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ, ವರ್ತೂರು ಪ್ರಕಾಶ್, ಎಂ ನಾರಾಯಣಸ್ವಾಮಿ, ವೆಂಕಟಮುನಿಯಪ್ಪ. ಬಿ.ವಿ ಮಹೇಶ್, ಸಂಪಂಗಿ, ಮಂಜುನಾಥ್ ಹಾಗು ಹಲವರು ಭಾಗಿಯಾಗಿದ್ದರು. ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಆಣೆ ಪ್ರಮಾಣ ನಡೆದಿದೆ. ಎಲ್ಲರ ಕೈ ಮುಂದಿಟ್ಟು ಆಣೆ ಪ್ರಮಾಣ ಭೋದಿಸಿರುವ ಸಚಿವ ಮುನಿರತ್ನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 
 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more