ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

ಟಿಕೆಟ್ ಸಿಗದಿದ್ರೂ ಬಿಜೆಪಿ ಬಿಟ್ಟೋಗಲ್ಲ ಅಂತ ಆಣೆ ಪ್ರಮಾಣ ಮಾಡಿಸಿದ ಮುನಿರತ್ನ: ವಿಡಿಯೋ ವೈರಲ್‌

Published : Jan 27, 2023, 02:18 PM IST

ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಆಣೆ ಪ್ರಮಾಣ ನಡೆದಿದೆ. ಎಲ್ಲರ ಕೈ ಮುಂದಿಟ್ಟು ಆಣೆ ಪ್ರಮಾಣ ಭೋದಿಸಿರುವ ಸಚಿವ ಮುನಿರತ್ನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 

ಕೋಲಾರ(ಜ.27):  ಟಿಕೆಟ್ ಕೈ ತಪ್ಪಿದ್ರೂ ಬಿಜೆಪಿ ಪಕ್ಷ ಬಿಟ್ಟೋಗಲ್ಲ ಅಂತ ಸಚಿವ ಮುನಿರತ್ನ ಆಣೆ ಪ್ರಮಾಣ ಮಾಡಿಸಿದ್ದಾರೆ. ಹೌದು, ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಪೈಪೋಟಿ ಹೆಚ್ಚಾಗಿದೆ. ಬಂಗಾರಪೇಟೆ ತಾಲೂಕು BJP ಟಿಕೆಟ್‌ಗಾಗಿ ಮಾಜಿ ಶಾಸಕರಾದ ಎಂ. ನಾರಾಯಣಸ್ವಾಮಿ, ವೆಂಕಟಮುನಿಯಪ್ಪ ಹಾಗೂ ಬಿ.ವಿ ಮಹೇಶ್, ವಿ ಶೇಷು, ಅಮರೇಶ್ ಸೇರಿದಂತೆ 6 ಮಂದಿ ಲಾಭಿ ನಡೆಸುತ್ತಿದ್ದಾರೆ.  

ಒಂದು ಕಾಲದ ಗುರು-ಶಿಷ್ಯರು.. ಬದ್ಧವೈರಿಗಳಾಗಿದ್ದು ಯಾಕೆ?: ಏನಿದು ‘ಹಳೇ ದ್ವೇಷ, ಹೊಸ ಲೆಕ್ಕಾಚಾರ’?

ಎಂ. ನಾರಾಯಣಸ್ವಾಮಿಗೆ ಟಿಕೆಟ್ ಕೈ ತಪ್ಪಿದ್ರೆ ಜೆಡಿಎಸ್‌ಗೆ ಬೆಂಬಲ ನೀಡುವ ಭೀತಿ ಎದುರಾಗಿದೆ. 2018 ರಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಎಂ. ನಾರಾಯಣಸ್ವಾಮಿ ಬಿಜೆಪಿ ಬಿಟ್ಟು ಜೆಡಿಎಸ್‌ ಪಕ್ಷ ಸೇರ್ಪಡೆಯಾಗಿದ್ದರು. ಕಳೆದ MLC ಚುನಾವಣೆಯಲ್ಲಿ ಬಿಜೆಪಿಗೆ ಮತ್ತೆ ವಾಪಾಸ್ ಆಗಿದ್ದರು. ಪಕ್ಷಾಂತರ ಭೀತಿ ಹಿನ್ನಲೆ ಏನೇ ಬೆಳವಣಿಗೆ ಆದರೂ  ಕೋಲಾರಮ್ಮ ದೇವಿ ಆಣೆ ಪಕ್ಷಕ್ಕೆ ದ್ರೋಹ ಮಾಡಲ್ಲ ಎಂದು ಮುನಿರತ್ನ ಆಣೆ ಮಾಡಿಸಿದ್ದಾರೆ. ಮುನಿರತ್ನ ಆಣೆ ಪ್ರಮಾಣ ಮಾಡಿಸಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆಣೆ ಪ್ರಮಾಣದಲ್ಲಿ ಸಚಿವ ಮುನಿರತ್ನ, ಸಂಸದ ಮುನಿಸ್ವಾಮಿ, ವರ್ತೂರು ಪ್ರಕಾಶ್, ಎಂ ನಾರಾಯಣಸ್ವಾಮಿ, ವೆಂಕಟಮುನಿಯಪ್ಪ. ಬಿ.ವಿ ಮಹೇಶ್, ಸಂಪಂಗಿ, ಮಂಜುನಾಥ್ ಹಾಗು ಹಲವರು ಭಾಗಿಯಾಗಿದ್ದರು. ಕೋಲಾರ ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಆಣೆ ಪ್ರಮಾಣ ನಡೆದಿದೆ. ಎಲ್ಲರ ಕೈ ಮುಂದಿಟ್ಟು ಆಣೆ ಪ್ರಮಾಣ ಭೋದಿಸಿರುವ ಸಚಿವ ಮುನಿರತ್ನ ವಿಡಿಯೋ ಸಖತ್ ವೈರಲ್ ಆಗುತ್ತಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more