ಕರಾವಳಿಯಲ್ಲಿ ಮತ್ತೊಮ್ಮೆ ಕೇಸರಿ ಪಡೆಗೆ ಮುಖಭಂಗ: ಬಿಜೆಪಿ ಬೆಂಬಲಿತ ಸದಸ್ಯನಿಂದಲೇ ಎಸ್‌ಡಿಪಿಐಗೆ ಸಾಥ್ !

ಕರಾವಳಿಯಲ್ಲಿ ಮತ್ತೊಮ್ಮೆ ಕೇಸರಿ ಪಡೆಗೆ ಮುಖಭಂಗ: ಬಿಜೆಪಿ ಬೆಂಬಲಿತ ಸದಸ್ಯನಿಂದಲೇ ಎಸ್‌ಡಿಪಿಐಗೆ ಸಾಥ್ !

Published : Aug 11, 2023, 11:31 AM IST

ಎಸ್‌ಡಿಪಿಐ ಜೊತೆ ಕೇಸರಿ ಪಡೆ ಬಿಜೆಪಿ ಪ್ರತೀ ಬಾರಿ ಮುಗಿ ಬೀಳ್ತಾನೆ ಇದೆ. ಕಾರ್ಯಕರ್ತರ ಹತ್ಯೆ ವಿಚಾರದಲ್ಲೂ ಎಸ್‌ಡಿಪಿಐ ಮೇಲೆ ನಿರಂತರ ಆರೋಪಗಳಿವೆ.‌ ಆದರೆ ಸ್ಥಳೀಯ ಗ್ರಾಮ ಪಂಚಾಯತ್ ಆಡಳಿತದ ವಿಚಾರದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರೇ ಎಸ್‌ಡಿಪಿಐಗೆ ಸಾಥ್ ನೀಡಿದ್ದಾರೆ. ಈ ಮೂಲಕ ಮಂಗಳೂರಿನ ತಲಪಾಡಿ ಗ್ರಾ.ಪಂ ಎಸ್ಡಿಪಿಐ ತೆಕ್ಕೆಗೆ ಜಾರಿದೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ(BJP) ಭಾರೀ ಮುಖಭಂವಾಗಿವೆ. ಧರ್ಮ ದಂಗಲ್ ಮತ್ತು ಹಿಂದೂ ಸಂಘಟನೆ ವರ್ಸಸ್ ಬಿಜೆಪಿ ಫೈಟ್ ಮಧ್ಯೆ ಕಾಂಗ್ರೆಸ್(Congress) ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿತ್ತು. ಈಗ ಗ್ರಾಮ ಪಂಚಾಯತ್(Gram Panchayat) ಚುನಾವಣೆಯಲ್ಲೂ ಬಿಜೆಪಿಗೆ ಮುಖಭಂಗವಾಗಿದೆ. ಬಿಜೆಪಿ ಹೆಚ್ಚು ಸದಸ್ಯ ಬಲ ಹೊಂದಿದ್ದ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಎಸ್ಡಿಪಿಐ(SDPI) ಪಾಲಾಗಿದೆ.ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಮತ್ತೆ ಅಧ್ಯಕ್ಷಗಾದಿ ಚುನಾವಣೆ ನಡೀತಾ ಇದೆ. ಅದರಂತೆ‌ ದ.ಕ ಜಿಲ್ಲೆಯಲ್ಲೂ ಹಲವು ಪಂಚಾಯತ್‌ಗಳ ಆಡಳಿತಕ್ಕಾಗಿ ಸೆಣಸಾಟ‌‌ ನಡೀತಾ ಇದ್ದು, ತಲಪಾಡಿ ಗ್ರಾ.ಪಂ ಅಧ್ಯಕ್ಷಗಾದಿ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಅದರಲ್ಲೀ ಎಸ್ಡಿಪಿಐಗೆ ಬಿಜೆಪಿ ಬೆಂಬಲಿತ ಸದಸ್ಯರೇ ಸಾಥ್ ಕೊಡುವ ಮೂಲಕ ತಲಪಾಡಿ ಗ್ರಾ.ಪಂ ಆಡಳಿತ ಎಸ್ಡಿಪಿಐ ತೆಕ್ಕೆಗೆ ಜಾರಿದೆ.‌ ದಕ್ಷಿಣ ಕನ್ನಡ(Dakshina kannada) ಜಿಲ್ಲೆ ಉಳ್ಳಾಲ ತಾಲೂಕಿನ ತಲಪಾಡಿ‌ ಗ್ರಾಮ ಪಂಚಾಯತ್‌ನಲ್ಲಿ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಚುನಾವಣೆ ನಡೆಯಿತು. 

ಇದನ್ನೂ ವೀಕ್ಷಿಸಿ:  20 ಸಾವಿರ ಕೊಟ್ರೆ ದಾಖಲೆಯಿಲ್ಲದೆ ಭಾರತಕ್ಕೆ ಎಂಟ್ರಿ: ಶಂಕಿತನೊಬ್ಬನ‌ ವಿಚಾರಣೆಯಲ್ಲಿ ಎನ್ಐಎಗೆ ಸ್ಪೋಟಕ‌ ಮಾಹಿತಿ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more