
ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರಿದೆ. ನಟ ವಿಜಯ್ ಅವರ ಟಿವಿಕೆ ಪಕ್ಷವು ಡಿಎಂಕೆಗೆ ಸವಾಲು ಹಾಕುತ್ತಿದ್ದರೆ, ಮತ್ತೊಂದೆಡೆ ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಸೀಟು ಹಂಚಿಕೆ ಗೊಂದಲ ಮುಂದುವರೆದಿದೆ. ಈ ನಡುವೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ ಹೊಸ ತಿರುವು ನೀಡಿದೆ.
ತಮಿಳುನಾಡು ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿಯಿದೆ. ಇದರ ನಡುವೆ ಮತ್ತೆ ನಾವೇ ಅಧಿಕಾರಕ್ಕೆ ಬರ್ತೇವೆ ಅಂತ ಡಿಎಂಕೆ ಹೇಳ್ತಿದ್ರೆ. ಡಿಎಂಕೆ ಸೋಲಿಸುವುದು ಟಿವಿಕೆಯಿಂದ ಮಾತ್ರ ಸಾಧ್ಯ ಅಂತ ನಟ ವಿಜಯ್ ಕೌಂಟರ್ ಕೊಡ್ತಿದ್ದಾರೆ.ಇತ್ತ ಎನ್ಡಿಎ ಮೈತ್ರಿಕೂಟವೂ ಚುನಾವಣಾ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಇನ್ನೂ ಚುನಾವಣೆ ಹೊತ್ತಲ್ಲಿ ಅಣ್ಣಾಮಲೈ ಬಿಗ್ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಡಿಎಂಕೆ ಮೈತ್ರಿಕೂಟದ ಹಗ್ಗ ಜಗ್ಗಾಟ ಮುಂದುವರೆದಿದೆ.