ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

ಎಎಪಿ ಕೇವಲ ರಾಜಕೀಯ ಪಕ್ಷ ಅಲ್ಲ ಇದೊಂದು ಕ್ರಾಂತಿ: ಕೇಜ್ರಿವಾಲ್

Published : Mar 10, 2022, 07:19 PM IST

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ  ಮಾತನಾಡಿದ ಕೇಜ್ರಿವಾಲ್,  ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು.

ನವದೆಹಲಿ(ಮಾ.10): ಪಂಜಾಬ್‌ (Punjab) ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ(AAP) ಸ್ಪಷ್ಟ ಬಹುಮತ ಪಡೆದಿದ್ದು, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ‘ಕ್ರಾಂತಿ’ ತಂದ ರಾಜ್ಯದ ಜನರನ್ನು ಅಭಿನಂದಿಸಿದ್ದಾರೆ. ಧುರಿ ಕ್ಷೇತ್ರದಿಂದ ಮುನ್ನಡೆ ಸಾಧಿಸುತ್ತಿರುವ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರೊಂದಿಗೆ ಅವರು ತಮ್ಮ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ.

5 STATES ELECTION: ಮೋದಿ ನಂಬಿ ಮತ ನೀಡಿದವರಿಗೆ ಧನ್ಯವಾದ ಎಂದ ಕೇಂದ್ರ ಸಚಿವ ನಾರಾಯಣಸ್ವಾಮಿ

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಇಂದು ಪಂಜಾಬ್‌ ನಲ್ಲಿ ಆಮ್ ಆದ್ಮಿ ಪಕ್ಷದ ಅದ್ಭುತ ವಿಜಯದೊಂದಿಗೆ ದೇಶದ ಜನ "ಕೇಜ್ರಿವಾಲ್ ಭಯೋತ್ಪಾದಕನಲ್ಲ, ಅವರು ಈ ದೇಶದ ಮಗ, ನಿಜವಾದ ದೇಶಭಕ್ತ" ಎಂದು ಮಾತನಾಡಿದ್ದಾರೆ ಎಂದರು. ಎಎಪಿ ಕೇವಲ "ಒಂದು ರಾಜಕೀಯ ಪಕ್ಷ ಅಲ್ಲ" - ಇದು ಒಂದು ಕ್ರಾಂತಿ ಎಂದು ಅರವಿಂದ್ ಕೇಜ್ರಿವಾಲ್ (arvind kejriwal) ಅವರು ಹೇಳಿದ್ದಾರೆ. "ಇದು ಬದಲಾವಣೆಯ ಸಮಯ, ಇಂಕ್ವಿಲಾಬ್(ಕ್ರಾಂತಿ). ಎಎಪಿಗೆ ಸೇರುವಂತೆ ನಾನು ನಿಮ್ಮೆಲ್ಲರನ್ನು ಒತ್ತಾಯಿಸುತ್ತೇನೆ. ಎಎಪಿ ಕೇವಲ ಒಂದು ಪಕ್ಷವಲ್ಲ. ಇದು ಕ್ರಾಂತಿಯ ಹೆಸರು" ಎಂದು ದೆಹಲಿಯಲ್ಲಿ ಎಎಪಿ ಮುಖ್ಯಸ್ಥರು ಹೇಳಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more