ರೇವಂತ್‌ ರೆಡ್ಡಿ ತೆಲಂಗಾಣದ ಹೊಸ ಸಿಎಂ, ಡಿ.7ಕ್ಕೆ ಪ್ರಮಾಣವಚನ!

ರೇವಂತ್‌ ರೆಡ್ಡಿ ತೆಲಂಗಾಣದ ಹೊಸ ಸಿಎಂ, ಡಿ.7ಕ್ಕೆ ಪ್ರಮಾಣವಚನ!

Published : Dec 05, 2023, 08:09 PM IST


ದೇಶದ ಅತ್ಯಂತ ಯುವ ರಾಜ್ಯವಾಗಿರುವ ತೆಲಂಗಾಣದ 2ನೇ ಸಿಎಂ ಆಗಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರೇವಂತ್‌ ರೆಡ್ಡಿ ಡಿ.7 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನವದೆಹಲಿ(ಡಿ.5): ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ರೇವಂತ್‌ ರೆಡ್ಡಿ ಅವರನ್ನು ತೆಲಂಗಾಣ ವಿಧಾನಸಭೆಯ ಕಾಂಗ್ರೆಸ್‌ನ ಶಾಸಕಾಂಗ ಸಭೆಯ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ. ಡಿಸೆಂಬರ್‌ 7 ರಂದು ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಇದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ 48 ಗಂಟೆಗಳ ಬಳಿಕ ಎಐಸಿಸಿಯಿಂದ ಈ ನಿರ್ಧಾರ ಬಂದಿದೆ.

ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

ಈವರೆಗೂ ಅಧಿಕಾರದಲ್ಲಿದ್ದ ಬಿಆರ್‌ಎಸ್‌ ಪಕ್ಷವನ್ನು ಮಣಿಸಿ ಕಾಂಗ್ರೆಸ್‌ ಅಧಿಕಾರಕ್ಕೇರಿದೆ. 2014ರ ಜೂನ್‌ನಲ್ಲಿ ತೆಲಂಗಾಣ ರಾಜ್ಯ ಅಸ್ತಿತ್ವಕ್ಕೆ ಬಂದಿತ್ತು. 2014 ಹಾಗೂ 2018ರ ಚುನಾವಣೆಯಲ್ಲಿ ಗೆದ್ದಿದ್ದ ಬಿಆರ್‌ಎಸ್‌ (ಅಂದಿನ ಟಿಆರ್‌ಎಸ್‌) ಅಧಿಕಾರ ಹಿಡಿದಿತ್ತು. ಕೆ. ಚಂದ್ರಶೇಖರ್‌ ರಾವ್‌ ಎರಡೂ ಅವಧಿಯಲ್ಲಿ ರಾಜ್ಯ ಸಿಎಂ ಆಗಿದ್ದರು, ರೇವಂತ್‌ ರೆಡ್ಡಿ ರಾಜ್ಯದ 2ನೇ ಸಿಎಂ ಆಗಲಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more