ರೇವಂತ್‌ ರೆಡ್ಡಿ ತೆಲಂಗಾಣದ ಹೊಸ ಸಿಎಂ, ಡಿ.7ಕ್ಕೆ ಪ್ರಮಾಣವಚನ!

ರೇವಂತ್‌ ರೆಡ್ಡಿ ತೆಲಂಗಾಣದ ಹೊಸ ಸಿಎಂ, ಡಿ.7ಕ್ಕೆ ಪ್ರಮಾಣವಚನ!

Published : Dec 05, 2023, 08:09 PM IST


ದೇಶದ ಅತ್ಯಂತ ಯುವ ರಾಜ್ಯವಾಗಿರುವ ತೆಲಂಗಾಣದ 2ನೇ ಸಿಎಂ ಆಗಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರೇವಂತ್‌ ರೆಡ್ಡಿ ಡಿ.7 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನವದೆಹಲಿ(ಡಿ.5): ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ರೇವಂತ್‌ ರೆಡ್ಡಿ ಅವರನ್ನು ತೆಲಂಗಾಣ ವಿಧಾನಸಭೆಯ ಕಾಂಗ್ರೆಸ್‌ನ ಶಾಸಕಾಂಗ ಸಭೆಯ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ. ಡಿಸೆಂಬರ್‌ 7 ರಂದು ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಇದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ 48 ಗಂಟೆಗಳ ಬಳಿಕ ಎಐಸಿಸಿಯಿಂದ ಈ ನಿರ್ಧಾರ ಬಂದಿದೆ.

ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

ಈವರೆಗೂ ಅಧಿಕಾರದಲ್ಲಿದ್ದ ಬಿಆರ್‌ಎಸ್‌ ಪಕ್ಷವನ್ನು ಮಣಿಸಿ ಕಾಂಗ್ರೆಸ್‌ ಅಧಿಕಾರಕ್ಕೇರಿದೆ. 2014ರ ಜೂನ್‌ನಲ್ಲಿ ತೆಲಂಗಾಣ ರಾಜ್ಯ ಅಸ್ತಿತ್ವಕ್ಕೆ ಬಂದಿತ್ತು. 2014 ಹಾಗೂ 2018ರ ಚುನಾವಣೆಯಲ್ಲಿ ಗೆದ್ದಿದ್ದ ಬಿಆರ್‌ಎಸ್‌ (ಅಂದಿನ ಟಿಆರ್‌ಎಸ್‌) ಅಧಿಕಾರ ಹಿಡಿದಿತ್ತು. ಕೆ. ಚಂದ್ರಶೇಖರ್‌ ರಾವ್‌ ಎರಡೂ ಅವಧಿಯಲ್ಲಿ ರಾಜ್ಯ ಸಿಎಂ ಆಗಿದ್ದರು, ರೇವಂತ್‌ ರೆಡ್ಡಿ ರಾಜ್ಯದ 2ನೇ ಸಿಎಂ ಆಗಲಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more