ರೇವಂತ್‌ ರೆಡ್ಡಿ ತೆಲಂಗಾಣದ ಹೊಸ ಸಿಎಂ, ಡಿ.7ಕ್ಕೆ ಪ್ರಮಾಣವಚನ!

ರೇವಂತ್‌ ರೆಡ್ಡಿ ತೆಲಂಗಾಣದ ಹೊಸ ಸಿಎಂ, ಡಿ.7ಕ್ಕೆ ಪ್ರಮಾಣವಚನ!

Published : Dec 05, 2023, 08:09 PM IST


ದೇಶದ ಅತ್ಯಂತ ಯುವ ರಾಜ್ಯವಾಗಿರುವ ತೆಲಂಗಾಣದ 2ನೇ ಸಿಎಂ ಆಗಿ ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರೇವಂತ್‌ ರೆಡ್ಡಿ ಡಿ.7 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನವದೆಹಲಿ(ಡಿ.5): ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ರೇವಂತ್‌ ರೆಡ್ಡಿ ಅವರನ್ನು ತೆಲಂಗಾಣ ವಿಧಾನಸಭೆಯ ಕಾಂಗ್ರೆಸ್‌ನ ಶಾಸಕಾಂಗ ಸಭೆಯ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ. ಡಿಸೆಂಬರ್‌ 7 ರಂದು ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಇದನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ.ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ 48 ಗಂಟೆಗಳ ಬಳಿಕ ಎಐಸಿಸಿಯಿಂದ ಈ ನಿರ್ಧಾರ ಬಂದಿದೆ.

ತೆಲಂಗಾಣದಲ್ಲಿ ಸಿಎಂ ರೇಸ್‌ನಲ್ಲಿ ರೇವಂತ್‌ ರೆಡ್ಡಿ V/S ಉತ್ತಮ್‌ ರೆಡ್ಡಿ ? ಯಾರಿಗೆ ಪಟ್ಟ ?

ಈವರೆಗೂ ಅಧಿಕಾರದಲ್ಲಿದ್ದ ಬಿಆರ್‌ಎಸ್‌ ಪಕ್ಷವನ್ನು ಮಣಿಸಿ ಕಾಂಗ್ರೆಸ್‌ ಅಧಿಕಾರಕ್ಕೇರಿದೆ. 2014ರ ಜೂನ್‌ನಲ್ಲಿ ತೆಲಂಗಾಣ ರಾಜ್ಯ ಅಸ್ತಿತ್ವಕ್ಕೆ ಬಂದಿತ್ತು. 2014 ಹಾಗೂ 2018ರ ಚುನಾವಣೆಯಲ್ಲಿ ಗೆದ್ದಿದ್ದ ಬಿಆರ್‌ಎಸ್‌ (ಅಂದಿನ ಟಿಆರ್‌ಎಸ್‌) ಅಧಿಕಾರ ಹಿಡಿದಿತ್ತು. ಕೆ. ಚಂದ್ರಶೇಖರ್‌ ರಾವ್‌ ಎರಡೂ ಅವಧಿಯಲ್ಲಿ ರಾಜ್ಯ ಸಿಎಂ ಆಗಿದ್ದರು, ರೇವಂತ್‌ ರೆಡ್ಡಿ ರಾಜ್ಯದ 2ನೇ ಸಿಎಂ ಆಗಲಿದ್ದಾರೆ.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more