ಏಕವಚನದಲ್ಲಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
ಬೆಂಗಳೂರು, (ಜ.22): ಏಕವಚನದಲ್ಲಿ ಗುಡುಗಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.
Karnataka Politics ತುಮಕೂರು ಜಿಲ್ಲೆಯೇನು ನಿಮಪ್ಪನ ಜಹಗೀರಾ? ಸಿದ್ದುಗೆ ಎಚ್ಡಿಕೆ ಗುದ್ದು
ಇಂದು(ಶನಿವಾರ) ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು. ಚುನಾವಣೆ ನಾನು ಸೋತ್ತಿದ್ದೇನೆ. ಯಾಕೆ ಕುಮಾರಸ್ವಾಮಿ ಸೋತಿಲ್ವಾ, ಅವರಪ್ಪ ಸೋತಿಲ್ಲಾ, ಮಗ ಸೋತಿಲ್ವಾ ಎಂದು ತಿರುಗೇಟು ನೀಡಿದರು.