ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

ಕಲಾಪದ ವೇಳೆ ಭದ್ರತಾ ಲೋಪ: 15 ನಿಮಿಷ ಬಜೆಟ್‌ ಕಲಾಪದಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿ !

Published : Jul 08, 2023, 12:11 PM IST

ಬಜೆಟ್‌ ಮಂಡನೆ ವೇಳೆ ಸದನದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಸುಮಾರು 15 ನಿಮಿಷ ಕುಳಿತಿರುವ ಆಘಾತಕಾರಿ ಘಟನೆ ನಡೆದಿದೆ.
 

ಬೆಂಗಳೂರು: ಬಜೆಟ್‌ ಮಂಡನೆ ವೇಳೆ ಸದನದಲ್ಲಿ ಭದ್ರತಾ ಲೋಪ ಉಂಟಾಗಿದೆ. ಶಾಸಕ(MLA) ಅಂತ ಹೇಳಿಕೊಂಡು ಅಪರಿಚಿತ ವ್ಯಕ್ತಿಯೊಬ್ಬರು ಹಾಜರಾಗಿದ್ದಾರೆ. ಸುಮಾರು 15 ನಿಮಿಷಗಳ ಕಾಲ ಅವರು ಸದನದಲ್ಲಿ(Session) ಕುಳಿತಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ(Karemma) ಆಸನದಲ್ಲಿ ಅಪರಿಚಿತ ವ್ಯಕ್ತಿ ಕುಳಿತಿದ್ದರು. ಈ ಬಗ್ಗೆ ಸ್ಪೀಕರ್‌ಗೆ ಜೆಡಿಎಸ್‌ ಶಾಸಕ ಶರಣಗೌಡ ಕಂದಕೂರು(Sharanagowda kandakuru) ದೂರು ಕೊಟ್ಟಿದ್ದಾರೆ. ಬಳಿಕ ವಿಧಾನಸಭಾ ಕಾರ್ಯದರ್ಶಿ ಮಾರ್ಷಲ್‌ಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇವರು ಚಿತ್ರದುರ್ಗದಲ್ಲಿ ವಕೀಲರಾಗಿ(Lawyer) ಕಾರ್ಯನಿರ್ವಹಿಸುತ್ತಿದ್ದರು. ಶಾಸಕ ಶರಣಗೌಡ ಕೇಳಿದಾಗ ಮೊಳಕಾಲ್ಮೂರು ಶಾಸಕ ಎಂದು ಹೇಳಿಕೊಂಡಿದ್ದಾರೆ. ಸದ್ಯ ಇವರ ವಿರುದ್ಧ ದೂರು ದಾಖಲಾಗಿದೆ. ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  ದಶಪಥ ಹೆದ್ದಾರಿಯಲ್ಲಿ ಸಂಚರಿಸುವವರು ಗಮನವಿಟ್ಟು ಕೇಳಿ: ಟೋಲ್‌ ಅಷ್ಟೇ ಅಲ್ಲ, ಅತಿ ವೇಗಕ್ಕೂ ದಂಡ..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?