ಸಿದ್ದು  ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

ಸಿದ್ದು ಅಹಿಂದ ಅಸ್ತ್ರ, ಡಿಕೆಶಿ ಒಕ್ಕಲಿಗ ಕಾರ್ಡ್, ನಾಯಕತ್ವದಲ್ಲಿ ಹೈಕಮಾಂಡ್ ಫುಲ್ ಕನ್‌ಫ್ಯೂಸ್..!

Published : Jul 21, 2022, 05:33 PM ISTUpdated : Jul 21, 2022, 05:37 PM IST

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. 

ಸಿದ್ದರಾಮೋತ್ಸವ ವ್ಯಕ್ತಿ ಪೂಜೆಯಲ್ಲ, ಶಕ್ತಿ ಪ್ರದರ್ಶನವಲ್ಲ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳುತ್ತಿದ್ದರೂ ಕಾಂಗ್ರೆಸ್ ಒಳಗೆ ಮಾತ್ರ ಈ ವಿಚಾರವಾಗಿ ಭಿನ್ನಾಬಿಪ್ರಾಯ ಇದ್ದ ಹಾಗೆ ಕಾಣಿಸುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವಂತೆಯೇ  ‘ಎಸ್‌.ಎಂ.ಕೃಷ್ಣ ನಂತರ ಒಕ್ಕಲಿಗ ಸಮುದಾಯದಿಂದ ನಾನು ಮುಖ್ಯಮಂತ್ರಿ ಸ್ಥಾನ ಸಿಗುವ ಹಂತ ತಲುಪಿದ್ದೇನೆ. ಹೀಗಾಗಿ ನನ್ನ ಕೈ ಬಲಪಡಿಸಿ ಎಂದು ಒಕ್ಕಲಿಗ ಸಮುದಾಯವನ್ನು ಮನವಿ ಮಾಡಿದ್ದೇನೆ’ಎಂದು ಡಿಕೆಶಿ ಒಕ್ಕಲಿಗ ಕಾರ್ಡ್ ಪ್ಲೇ ಮಾಡಿದ್ದಾರೆ. 

ತಾವು ಒಕ್ಕಲಿಗ ಸಮುದಾಯದ ನಾಯಕ ಅಷ್ಟೇ ಅಲ್ಲ ಎಲ್ಲ ಸಮುದಾಯಗಳಿಗೂ ನಾಯಕ ಎಂದು ಆಗಾಗ ಹೇಳುತ್ತಿದ್ದ ಶಿವಕುಮಾರ್‌ ಈಗ ನಿರ್ದಿಷ್ಟಸಮುದಾಯಕ್ಕೆ ಸಂದೇಶ ನೀಡಲು ಇದೇ ಸಮಯವನ್ನು ಆಯ್ಕೆ ಮಾಡಿದ್ದು ಏಕೆ ಎಂಬುದಕ್ಕೆ ಉತ್ತರ ಸಿದ್ದರಾಮೋತ್ಸವಕ್ಕೆ ರಾಹುಲ್‌ ಗಾಂಧಿ ಆಗಮನ!

ಸಿದ್ದರಾಮಯ್ಯ ಬಣದ ಶಕ್ತಿ ಪ್ರದರ್ಶನದ ಅಖಾಡವಾಗಿರುವ ಈ ವೇದಿಕೆಯಲ್ಲಿ ಪಕ್ಷದ ವರಿಷ್ಠ ರಾಹುಲ್‌ ಗಾಂಧಿ ನೀಡುವ ಸಂದೇಶ ಅತಿ ಮುಖ್ಯವಾಗುತ್ತದೆ. ಯಾವುದೇ ಭಿನ್ನ ರಾಗವಿಲ್ಲದೆ ಸರಾಗವಾಗಿ ಈ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಹರಸಿ ದೆಹಲಿಗೆ ತೆರಳಿದರೆ ಅದು ಸಿದ್ದರಾಮಯ್ಯ ಪರ ಸ್ಪಷ್ಟಸಂದೇಶವಾಗಿ ಬಿಡುತ್ತದೆ ಎನ್ನುವುದು ಲೆಕ್ಕಾಚಾರ!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more