ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ  ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

Published : Dec 18, 2023, 12:08 PM IST

ಅನಂತಕುಮಾರ್ ಹೆಗಡೆ ನಿರ್ಧಾರದ ಮೇಲೆ ನಿಂತಿದೆ ಭವಿಷ್ಯ 
ಅನಂತ ಕುಮಾರ್ ಹೆಗಡೆ ತೀರ್ಮಾನದತ್ತ ಆಕಾಂಕ್ಷಿಗಳ ಚಿತ್ತ 
ವಿಧಾನಸಭಾ ಸೋಲಿನ ಬಳಿಕ ಅ್ಯಕ್ಟಿವ್ ಆಗಿರೋ ಕಾಗೇರಿ

ಪಂಚರಾಜ್ಯ ಚುನಾವಣೆ ಬಳಿಕ ಇದೀಗ ಲೋಕಸಭೆ ಎಲೆಕ್ಷನ್‌(Loksabha election) ಫೀವರ್ ಶುರುವಾಗಿದೆ. ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದು ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಹೇಳಿದಂತೆ ಕಾಣುತ್ತಿದೆ. ಅನಂತಕುಮಾರ್ ಹೆಗಡೆ ನಿರ್ಧಾರದ ಮೇಲೆ ಕಾಗೇರಿ ಭವಿಷ್ಯ ನಿಂತಿದೆ. ಸ್ಪರ್ಧಿಸಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿರುವ ಅನಂತ್ ಕುಮಾರ್(Anantkumar Hegde) ಹೇಳಿಕೊಂಡಿದ್ದಾರೆ. ಅನಂತ ಕುಮಾರ್ ಹೆಗಡೆ ತೀರ್ಮಾನದತ್ತ ಆಕಾಂಕ್ಷಿಗಳ ಚಿತ್ತ ಇದೆ. ವಿಧಾನಸಭಾ ಸೋಲಿನ ಬಳಿಕ ಕಾಗೇರಿ ಆ್ಯಕ್ಟಿವ್ ಆಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರ ಹೊರತಾಗಿ ಜಿಲ್ಲೆಯಾದಯಂತ ಆ್ಯಕ್ಟಿವ್ ಆಗಿದ್ದಾರೆ. ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಕಾಗೇರಿ ಭಾಗಿಯಾಗ್ತಿದ್ದಾರೆ. ನಾನು ನನ್ನ ವಿಚಾರ ಎಲ್ಲಿ ಪ್ರಸ್ತಾಪ ಮಾಡಬೇಕೋ ಅಲ್ಲಿ ಹೇಳಿದ್ದೇನೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕಾಗೇರಿ ಹೇಳಿದ್ದಾರೆ. ಕಾಗೇರಿ ಜೊತೆಗೆ ಬಿಜೆಪಿಯಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ ಹಲವರು. ಮಾಜಿ ಶಾಸಕಿ ರೂಪಾಲಿ ನಾಯ್ಕ್, ಆನಂದ್ ಆಸ್ನೋಟಿಕರ್, ಶಶಿ ಭೂಷಣ್ ಹೆಗ್ಡೆ, ಉದ್ಯಮಿ ಅನಂತಮೂರ್ತಿ ಹೆಗಡೆ  ರೇಸ್‌ನಲ್ಲಿ ಇದ್ದಾರೆ. 

ಇದನ್ನೂ ವೀಕ್ಷಿಸಿ:  ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more