ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ  ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

Published : Dec 18, 2023, 12:08 PM IST

ಅನಂತಕುಮಾರ್ ಹೆಗಡೆ ನಿರ್ಧಾರದ ಮೇಲೆ ನಿಂತಿದೆ ಭವಿಷ್ಯ 
ಅನಂತ ಕುಮಾರ್ ಹೆಗಡೆ ತೀರ್ಮಾನದತ್ತ ಆಕಾಂಕ್ಷಿಗಳ ಚಿತ್ತ 
ವಿಧಾನಸಭಾ ಸೋಲಿನ ಬಳಿಕ ಅ್ಯಕ್ಟಿವ್ ಆಗಿರೋ ಕಾಗೇರಿ

ಪಂಚರಾಜ್ಯ ಚುನಾವಣೆ ಬಳಿಕ ಇದೀಗ ಲೋಕಸಭೆ ಎಲೆಕ್ಷನ್‌(Loksabha election) ಫೀವರ್ ಶುರುವಾಗಿದೆ. ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದು ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಹೇಳಿದಂತೆ ಕಾಣುತ್ತಿದೆ. ಅನಂತಕುಮಾರ್ ಹೆಗಡೆ ನಿರ್ಧಾರದ ಮೇಲೆ ಕಾಗೇರಿ ಭವಿಷ್ಯ ನಿಂತಿದೆ. ಸ್ಪರ್ಧಿಸಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿರುವ ಅನಂತ್ ಕುಮಾರ್(Anantkumar Hegde) ಹೇಳಿಕೊಂಡಿದ್ದಾರೆ. ಅನಂತ ಕುಮಾರ್ ಹೆಗಡೆ ತೀರ್ಮಾನದತ್ತ ಆಕಾಂಕ್ಷಿಗಳ ಚಿತ್ತ ಇದೆ. ವಿಧಾನಸಭಾ ಸೋಲಿನ ಬಳಿಕ ಕಾಗೇರಿ ಆ್ಯಕ್ಟಿವ್ ಆಗಿದ್ದಾರೆ. ಶಿರಸಿ ವಿಧಾನಸಭಾ ಕ್ಷೇತ್ರ ಹೊರತಾಗಿ ಜಿಲ್ಲೆಯಾದಯಂತ ಆ್ಯಕ್ಟಿವ್ ಆಗಿದ್ದಾರೆ. ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಕಾಗೇರಿ ಭಾಗಿಯಾಗ್ತಿದ್ದಾರೆ. ನಾನು ನನ್ನ ವಿಚಾರ ಎಲ್ಲಿ ಪ್ರಸ್ತಾಪ ಮಾಡಬೇಕೋ ಅಲ್ಲಿ ಹೇಳಿದ್ದೇನೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಕಾಗೇರಿ ಹೇಳಿದ್ದಾರೆ. ಕಾಗೇರಿ ಜೊತೆಗೆ ಬಿಜೆಪಿಯಲ್ಲಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ ಹಲವರು. ಮಾಜಿ ಶಾಸಕಿ ರೂಪಾಲಿ ನಾಯ್ಕ್, ಆನಂದ್ ಆಸ್ನೋಟಿಕರ್, ಶಶಿ ಭೂಷಣ್ ಹೆಗ್ಡೆ, ಉದ್ಯಮಿ ಅನಂತಮೂರ್ತಿ ಹೆಗಡೆ  ರೇಸ್‌ನಲ್ಲಿ ಇದ್ದಾರೆ. 

ಇದನ್ನೂ ವೀಕ್ಷಿಸಿ:  ಅಹಿಂದ ದಾಳ ಬಳಕೆಗೆ ಮುಂದಾದ್ರಾ ಸಿಎಂ ? ಒಕ್ಕಲಿಗ, ಲಿಂಗಾಯತರ ವಿರುದ್ಧ ಅಹಿಂದ ಕೌಂಟರ್ !

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more